ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಪ್ರಾಣಿಗಳ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಕರ್ನಾಟಕ ಪ್ರಾಣಿ ಮಂಡಳಿಯ ಆಡಳಿತ ಮಂಡಳಿಯ ಸಭೆಯಲ್ಲಿ ಅವರು ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.
ಪ್ರಾಣಿಗಳ ಮೇಲೆ ಹಿಂಸೆ ಎಸಗುವವರ ವಿರುದ್ಧ ಇರುವ ಕಾನೂನು ಕ್ರಮಗಳನ್ನು ಮತ್ತಷ್ಟು ಕಠಿಣಗೊಳಿಸುವುದಕ್ಕೆ ಪೂರಕವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನೂ ಸಚಿವರು ನೀಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದನ್ವಯ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಮಂಡಳಿಯನ್ನೂ ಸ್ಥಾಪನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಾಣಿಗಳ ಸಂಬಂಧಿಸಿದಂತಹ ವಿಚಾರಗಳಲ್ಲಿ ಎದುರಾಗುವ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು, ಅವುಗಳ ಸಂರಕ್ಷಣೆಗೆ ಪೂರಕವಾದ ಕ್ರಮಗಳನ್ನು ತೆಗೆದುಕೊಳ್ಳುವತ್ತ ಗಮನ ಹರಿಸುವುದಾಗಿಯೂ ಸಚಿವರು ಭರವಸೆ ನೀಡಿದ್ದಾರೆ. ಜೊತಗೆ ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರು, ಪ್ರಾಣಿಗಳಿಗೆ ಶೆಡ್ಡುಗಳನ್ನು ನಿರ್ಮಿಸಲು ಮುಂದಾಗುವುದರ ಮೂಲಕ ಅವುಗಳ ರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಪ್ರಾಣಿಗಳನ್ನು ಮಾನವೀಯತೆಯ ದೃಷ್ಟಿಯಿಂದ ನಡೆಸಿಕೊಳ್ಳುವಂತೆ ಜನರಿಗೆ ಅರಿವು ಮೂಡಿಸಲಾಗುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಇನ್ನು ಪ್ರಾಣಿಗಳ ಅಕ್ರಮ ಸಾಗಾಟ, ಹಿಂಸೆ ನೀಡುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಅಂತಹ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವುದಾಗಿಯೂ ಅವರು ತಿಳಿಸಿದ್ದಾರೆ. ಜೊತೆಗೆ ಪಶು ಹಾಗೂ ಪಕ್ಷಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಸ್ಥಾಪಿಸಲಾದ ಪ್ರಾಣಿಕಲ್ಯಾಣ ಸಂಘಗಳು/ ನಿಕಾಯಗಳು/ ಸಂಸ್ಥೆಗಳಿಗೆ ಮಾನ್ಯತೆ ನೀಡಲಾಗುವುದಾಗಿಯೂ ಚೌವ್ಹಾಣ್ ಮಾಹಿತಿ ನೀಡಿದ್ದಾರೆ.
ಒಟ್ಟಿನಲ್ಲಿ ಮಂಡಳಿಯ ಸದಸ್ಯರು ಪ್ರಾಣಿಗಳ ಯೋಗಕ್ಷೇಮ ಕಾಪಾಡುವ ಹಿತದೃಷ್ಟಿಯಿಂದ ಒಗ್ಗಟ್ಟಾಗಿ ಕೆಲಸ ಮಾಡುವಂತೆಯೂ ಸಭೆಯಲ್ಲಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.