ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಾಜೌರಿ ಪ್ರದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಹೆಚ್ಚಿಸಲು ಪಾಕಿಸ್ಥಾನದ ಐಎಸ್ಐ ಪ್ರಯತ್ನ ನಡೆಸುತ್ತಿದ್ದು, ಭಯೋತ್ಪಾದಕರನ್ನು ನೇಮಕ ಮಾಡಿಕೊಳ್ಳುವಲ್ಲಿ ನಿರತವಾಗಿದೆ. ಮೂಲಗಳ ಪ್ರಕಾರ, ರಾಜೌರಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಗುಂಡಿನ ಚಕಮಕಿ ಪಾಕಿಸ್ಥಾನದ ಐಎಸ್ಐ ಪಿತೂರಿಯ ಭಾಗವಾಗಿದೆ.
ಗುಪ್ತಚರ ಸಂಸ್ಥೆಯ ವರದಿಯ ಪ್ರಕಾರ, ಐಎಸ್ಐ ತಳಮಟ್ಟದ ಸದಸ್ಯರನ್ನು ತನ್ನ ನೆಟ್ವರ್ಕ್ಗೆ ಸೇರಿಸಿಕೊಳ್ಳುವ ಮೂಲಕ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು ಸಂಚು ರೂಪಿಸುತ್ತಿದೆ. ಈ ವರ್ಷದ ಆರಂಭದಲ್ಲಿ ಐಎಸ್ಐ ಪಿತೂರಿಯ ಬಗ್ಗೆ ಮಾಹಿತಿ ಬಹಿರಂಗವಾಗಿತ್ತು. ಜಮ್ಮುವಿನಲ್ಲಿರುವ ಭಯೋತ್ಪಾದಕ ಸಂಘಟನೆಗಳು ಭಯೋತ್ಪಾದಕ ದಾಳಿಯನ್ನು ನಡೆಸಲು ಹಲವಾರು ಪ್ರಯತ್ನಗಳನ್ನು ಮಾಡುತ್ತಿವೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಗುರುವಾರ, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದಿದ್ದು, ಇದರಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ವರದಿಗಳು ತಿಳಿಸಿವೆ.
ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಭಯೋತ್ಪಾದಕರ ಒಳನುಸುಳುವಿಕೆಯ ಬಗ್ಗೆ ನಿರ್ದಿಷ್ಟ ಮಾಹಿತಿಗಳನ್ನು ಪಡೆದ ನಂತರ ಜಿಲ್ಲೆಯ ಕಲಕೋಟೆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು, ಬಳಿಕ ಎನ್ಕೌಂಟರ್ ಪ್ರಾರಂಭವಾಯಿತು.
ಈ ನಡುವೆ, ರಾಜೌರಿ ಜಿಲ್ಲೆಯ ಸುಂದರ್ಬಾನಿ ಸೆಕ್ಟರ್ನಲ್ಲಿ ಗುರುವಾರ ಸಂಜೆ ಪಾಕಿಸ್ಥಾನ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಸಾವನ್ನಪ್ಪಿದ್ದಾರೆ. ಪಾಕಿಸ್ಥಾನದ ಕದನ ವಿರಾಮ ಉಲ್ಲಂಘನೆಯು ಸಂಜೆ 7 ಗಂಟೆ ಸುಮಾರಿಗೆ ನಡೆದಿದ್ದು, ಇದಕ್ಕೆ ಭಾರತೀಯ ಸೇನೆಯು ಸೂಕ್ತವಾಗಿ ಪ್ರತೀಕಾರ ತೀರಿಸಿಕೊಂಡಿದೆ.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಪಾಕಿಸ್ಥಾನ ಮತ್ತು ಅದರ ನಟೋರಿಯಸ್ ಗುಪ್ತಚರ ಸಂಘಟನೆ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸಲು ನಿರಂತರವಾಗಿ ಹವಣಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.