ಬೆಂಗಳೂರು: ರಾಜ್ಯದ ಬೊಕ್ಕಸಕ್ಕೆ ಜಿಎಸ್ಟಿ ನಷ್ಟದ ಪರಿಹಾರವಾಗಿ ಕೇಂದ್ರ ಸರ್ಕಾರ 4,314 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿರುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 2019 ರ.ಡಿಸೆಂಬರ್ ತಿಂಗಳಿನಿಂದ 2020 ರ ಫೆಬ್ರವರಿ ಈ ಮೂರು ತಿಂಗಳಿನಲ್ಲಾದ ಜಿಎಸ್ಟಿ ನಷ್ಟವನ್ನು ತುಂಬಲು ಕೇಂದ್ರ ಸರ್ಕಾರ ಈ ಪರಿಹಾರ ಒದಗಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಎದುರಿಸುತ್ತಿರುವ ಆರ್ಥಿಕ ನಷ್ಟದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಆ ಬಳಿಕ ಕೇಂದ್ರ ಈ ಪರಿಹಾರ ಮೊತ್ತವನ್ನು ರಾಜ್ಯಕ್ಕೆ ನೀಡಿರುವುದಾಗಿ ತಿಳಿಸಿದ್ದಾರೆ.
2019 ರ ಡಿಸೆಂಬರ್ನಿಂದ ತೊಡಗಿದಂತೆ ಫೆಬ್ರವರಿ 2020 ರ ವರೆಗೆ ಅಂದರೆ ಮೂರು ತಿಂಗಳ ಪರಿಹಾರ ಮೊತ್ತ ಈಗಾಗಲೇ ರಾಜ್ಯಕ್ಕೆ ಸಿಕ್ಕಿದ್ದು, ಮಾರ್ಚ್ ಮತ್ತು ಎಪ್ರಿಲ್ ತಿಂಗಳುಗಳ ಪರಿಹಾರ ಮೊತ್ತ ಜುಲೈ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆ ಇರುವುದಾಗಿಯೂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಜೊತೆಗೆ ಎಸ್ಡಿಆರ್ಎಫ್ ನಿಧಿಯಿಂದ ಕೊರೋನಾ ಪರಿಹಾರವಾಗಿ 580 ಕೋಟಿ ರೂ. ಗಳನ್ನೂ ಕೇಂದ್ರ ಸರ್ಕಾರ ಒದಗಿಸಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.
ಅಲ್ಲದೆ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಅವರಿಗೆ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
2/2
ಇದಕ್ಕಾಗಿ, ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ಹಾಗೂ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ @nsitharaman ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಧನ್ಯವಾದಗಳು.#GST @BSYBJP— CM of Karnataka (@CMofKarnataka) June 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.