ನವದೆಹಲಿ: ಭಾರತ-ಚೀನಾ ಗಡಿ ಪ್ರದೇಶದಲ್ಲಿ ಪ್ರಸ್ತುತ ಉದ್ಭವಿಸಿರುವ ಪರಿಸ್ಥಿತಿಯನ್ನು ಪರಿಹರಿಸಲು ಭಾರತ ಮತ್ತು ಚೀನಾ ಅಧಿಕಾರಿಗಳು ಸ್ಥಾಪಿತ ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಪ್ರಯತ್ನಪಡುತ್ತಿದ್ದಾರೆ ಎಂದು ಭಾರತೀಯ ಸೇನೆ ಶನಿವಾರ ತಿಳಿಸಿದೆ. ಈ ಹಂತದಲ್ಲಿ, ಈ ಪ್ರಯತ್ನಗಳ ಬಗ್ಗೆ ಯಾವುದೇ ಊಹಾತ್ಮಕ ಮತ್ತು ಆಧಾರರಹಿತ ವರದಿಗಳನ್ನು ಬಿತ್ತರಿಸುವುದು ಸರಿಯಾದುದಲ್ಲ ಮತ್ತು ಇಂತಹ ವರದಿಯಿಂದ ದೂರವಿರುವಂತೆ ಮಾಧ್ಯಮಗಳಿಗೆ ಸೂಚಿಸಲಾಗಿದೆ ಎಂದು ಭಾರತೀಯ ಸೇನೆಯ ವಕ್ತಾರರು ತಿಳಿಸಿದ್ದಾರೆ.
ಉಭಯ ದೇಶಗಳ ನಡುವೆ ಪೂರ್ವ ಲಡಾಕ್ನಲ್ಲಿ ಉದ್ಭವಿಸಿರುವ ಬಿಕ್ಕಟ್ಟನ್ನು ಪರಿಹರಿಸುವ ಸಲುವಾಗಿ, ಭಾರತ ಮತ್ತು ಚೀನಾದ ಮಿಲಿಟರಿ ಕಮಾಂಡರ್ಗಳ ನಡುವಿನ ಮಾತುಕತೆ ಚೀನಾದ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ನ ಮಾಲ್ಡೊದಲ್ಲಿ ಇಂದು ಪ್ರಾರಂಭವಾಯಿತು ಎಂದು ವರದಿಗಳು ತಿಳಿಸಿವೆ.
ಭಾರತೀಯ ಸೇನಾ ಕಮಾಂಡರ್ ಲೆಹ್ ಮೂಲದ 14 ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಅವರು ಸಭೆಯಲ್ಲಿ ಭಾರತದ ನೇತೃತ್ವ ವಹಿಸಿದ್ದಾರೆ. ಚೀನಾದ ಮೇಜರ್ ಜನರಲ್ ಲಿಯು ಲಿನ್ ಅವರು ಚೀನಾದ ನೇತೃತ್ವವಹಿಸಿದ್ದಾರೆ. ಇವರು ಚೀನಾ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ)ಯ ದಕ್ಷಿಣ ಕ್ಸಿನ್ಜಿಯಾಂಗ್ ಮಿಲಿಟರಿ ಪ್ರದೇಶದ ಕಮಾಂಡರ್ ಆಗಿದ್ದಾರೆ.
ಚೀನಾ ತನ್ನ 5,000 ಕ್ಕೂ ಹೆಚ್ಚು ಸೈನಿಕರನ್ನು ಎಲ್ಎಸಿಯಲ್ಲಿ ನಿಯೋಜಿಸಿದ ಬಳಿಕ ಉಭಯ ದೇಶಗಳ ನಡುವೆ ಮೇ ಮೊದಲ ವಾರದಿಂದ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದೆ. ಇದನ್ನು ನಿವಾರಣೆಗೊಳಿಸಲು ಭಾರತ-ಚೀನಾಗಳು ಹಲವು ಸುತ್ತಿನ ಮಾತುಕತೆ ನಡೆಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.