ಲಕ್ನೋ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ನಿವಾಸದಲ್ಲಿ ಸಸಿಗಳನ್ನು ನೆಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಋತುವಿನಲ್ಲಿ 30 ಕೋಟಿ ಸಸಿಗಳನ್ನು ನೆಡಲಾಗುವುದು ಎಂದರು. ಇದಕ್ಕಾಗಿ ಈಗಾಗಲೇ ಕೃಷಿ ಮತ್ತು ಹವಾಮಾನ ಇಲಾಖೆಯ ಜೊತೆಗೂ ಮಾತುಕತೆ ನಡೆಸಲಾಗಿದ್ದು, ಜುಲೈ ಮೊದಲ ವಾರದಲ್ಲಿಯೇ 25 ಕೋಟಿ ಸಸ್ಯಗಳನ್ನು ನೆಡಲಿದ್ದೇವೆ, ಔಷಧೀಯ, ಹಣ್ಣುಗಳ ಸಸ್ಯಗಳು ಸೇರಿದಂತೆ ಇನ್ನಿತರ ಎಲ್ಲಾ ಬಗೆಯ ಸಸ್ಯಗಳನ್ನು ನೆಟ್ಟು ಪೋಷಿಸಲಾಗುವುದು ಎಂದಿದ್ದಾರೆ.
ಅಲ್ಲದೇ ಪರಿಸರ ದಿನವು ಪ್ರಕೃತಿಯೊಂದಿಗಿನ ನಮ್ಮ ಸಂಬಂಧವನ್ನು ತಿಳಿಸುವ ಸಂದೇಶವನ್ನು ಸಾರುತ್ತದೆ. ಪ್ರಕೃತಿಯನ್ನು ಮಾನವೀಯ ನೆಲೆಯಲ್ಲಿ ಬಳಸಿಕೊಳ್ಳುವತ್ತ ಎಲ್ಲರೂ ಚಿತ್ತ ಹರಿಸಬೇಕಿದೆ. ಹೆಚ್ಚು ಹೆಚ್ಚು ಗಿಡಗಳನ್ನು ನೆಡುವ ಮೂಲಕ ಪ್ರಕೃತಿಯನ್ನು ರಕ್ಷಿಸುವ ಪ್ರತಿಜ್ಞೆ ಮಾಡಬೇಕು. ಈ ಸ್ಫೂರ್ತಿಯನ್ನು ನಾವು ಪಡೆಯಬೇಕಾಗಿದೆ ಎಂದು ಯೋಗಿ ಕಿವಿಮಾತು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಸಾವಯವ ಕೃಷಿಯನ್ನು ಮತ್ತಷ್ಟು ಉತ್ತೇಜಿಸುವ ಕ್ರಿಯಾ ಯೋಜನೆಗಳ ಬಗ್ಗೆ ಯೋಚಿಸಿ, ಕಾರ್ಯ ಯೋಜನೆ ಗಳನ್ನು ಸಿದ್ಧಪಡಿಸಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಗಂಗಾ ನದಿಯನ್ನು ಸ್ವಚ್ಛ ಹಾಗೂ ಶುದ್ಧ ಗೊಳಿಸಲು ತೆಗೆದುಕೊಂಡ ಕ್ರಮಗಳ ಫಲಿತಾಂಶ ಇಂದು ನಮ್ಮ ಕಣ್ಣೆದುರಿಗಿದೆ. ನಿರ್ಮಲವಾಗಿ ಗಂಗಾ ನದಿ ಹರಿಯುತ್ತಿದ್ದು ಅದರ ತಟದಲ್ಲಿ ವನಗಳನ್ನು ನಿರ್ಮಾಣ, ತೋಟಗಳ ನಿರ್ಮಾಣಕ್ಕಾಗಿ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ರೈತರಿಗೆ ತಮ್ಮ ಜಾಗಗಳಲ್ಲಿ ಬೆಳೆಯಲು ಉಚಿತ ಹಣ್ಣು, ನೆರಳು ನೀಡುವ ಮರಗಳಾಗುವಂತಹ ಸಸಿಗಳನ್ನು ಉಚಿತವಾಗಿ ನೀಡಲಾಗುತ್ತದೆ. ಜೊತೆಗೆ ಅನುದಾನವನ್ನೂ ಒದಗಿಸಲಾಗುತ್ತದೆ ಎಂದು ಯೋಗಿ ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.