ನವದೆಹಲಿ: ಪ್ರಸ್ತುತ ದೇಶದೆಲ್ಲೆಡೆ ಕೊರೋನಾವೈರಸ್ ತೀರಾ ಅಪಾಯಕಾರಿ ಎಂಬಂತೆ ವ್ಯಾಪಕವಾಗಿ ಹರಡಲಾರಂಭಿಸಿದ್ದು, ದೇಶವಾಸಿಗಳಲ್ಲಿ ಆತಂಕವನ್ನು ಉಂಟುಮಾಡಿದೆ. ಆದರೆ ಸಾವಿನ ಭತದ ಮುಂದೆ ಅದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಚೇತರಿಕೆ ಕಂಡುಕೊಂಡವರಿದ್ದಾರೆ ಎಂಬ ಅಂಶವನ್ನು ನಾವು ಗಮನಿಸಿಲ್ಲ. ಭಾರತದಲ್ಲಿ ಈ ವರೆಗಿನ ಅಂಕಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ 48.46% ದಷ್ಟು ಪ್ರಮಾಣದಲ್ಲಿ ಚೇತರಿಕೆ ಕಂಡವರಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ನೀಡಿದೆ.
1,29,215 ಕ್ಕೂ ಹೆಚ್ಚಿನ ಜನರು ಕೊರೋನಾ ಸೋಂಕಿಗೆ ಪೂರಕ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಹಿರಂಗಪಡಿಸಿದೆ. ಈ ವರೆಗೆ ದೇಶದಲ್ಲಿ ಒಟ್ಟು 2,66,598 ರಷ್ಟು ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಅವರಲ್ಲಿ 1,29 ಸಾವಿರಕ್ಕೂ ಅಧಿಕ ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 266 ಮಂದಿ ಸಾವನ್ನಪ್ಪುವ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,466 ಆಗಿದೆ ಎಂದೂ ಈ ವರದಿಯಲ್ಲಿ ತಿಳಿಸಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಂದು ಲಕ್ಷದ ನಲವತ್ತೊಂದು ಸಾವಿರದ ಆರುನೂರ ಎಂಬತ್ತೆರಡು ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದೂ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಆ ಮೂಲಕ ಈ ವರೆಗೆ 49,16,116 ಸೋಂಕಿತರ ಪರೀಕ್ಷೆ ದೇಶದಲ್ಲಿ ನಡೆದಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ. ದೇಶಾದ್ಯಂತ 533 ಸರ್ಕಾರಿ ಮತ್ತು 231 ಖಾಸಗಿ ಲ್ಯಾಬ್ಗಳು ಕೊರೋನಾ ಟೆಸ್ಟ್ ನಡೆಸುತ್ತಿದೆ ಎಂದೂ ಕೇಂದ್ರ ಆರೋಗ್ಯ ಸಚಿವಾಲಯ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.