ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರ ಮೇಲಿನ ದಾಳಿ ಮುಂದುವರೆದಿದೆ. ಆ ಮೂಲಕ 1990 ರ ಘಟನೆಗಳು ಮತ್ತೆ ಮರುಕಳಿಸಲಾರಂಭಿಸಿದೆ. ಜಮ್ಮು ಕಾಶ್ಮೀರದ ಅನಂತನಾಗ್ನಲ್ಲಿ ಕಾಶ್ಮೀರಿ ಪಂಡಿತ್ ಸರ್ಪಂಚ್ನನ್ನು ಉಗ್ರರು ಹತ್ಯೆ ಮಾಡುವ ಮೂಲಕ ಮೂರು ದಶಕಗಳ ಇತಿಹಾಸ ಮತ್ತೆ ಮರುಕಳಿಸಿದೆ.
ಹತರಾದ ಹಿಂದೂ ಸರ್ಪಂಚ್ನನ್ನು 40 ವರ್ಷದ ಅಜಯ್ ಪಂಡಿತ್ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅವರ ಮೇಲೆ ಹಲ್ಲೆ ನಡೆಸಿದ್ದ ಉಗ್ರರು ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಿಂದಾಗಿ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದ ಅಜಯ್ ಅವರನ್ನು ಆ ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಗಂಭೀರ ಗಾಯಗಳಿಂದಾಗಿ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಈ ಸಂಬಂಧ ಮಾಹಿತಿ ನೀಡಿದ್ದಾರೆ.
ಉಗ್ರಗಾಮಿಗಳಿಂದ ಹತ್ಯೆಯಾದ ಅಜಯ್ ಅವರು ಜಮ್ಮು ಕಾಶ್ಮೀರದ ಕಾಂಗ್ರೆಸ್ ಪಕ್ಷದಲ್ಲಿಯೂ ಗುರುತಿಸಿಕೊಂಡಿದ್ದರು. ಈ ಘಟನೆಯಿಂದಾಗಿ ಕಾಶ್ಮೀರದಲ್ಲಿ ಅಲ್ಪಸಂಖ್ಯಾತರೆಂದು ಗುರುತಿಸಿಕೊಳ್ಳುತ್ತಿರುವ ಕಾಶ್ಮೀರಿ ಪಂಡಿತರಲ್ಲಿಯೂ ಆತಂಕ ನಿರ್ಮಾಣವಾಗಿದೆ. ಜೊತೆಗೆ ಈ ಹತ್ಯೆಗೆ ಪಕ್ಷಾತೀತ ಖಂಡನೆಯೂ ವ್ಯಕ್ತವಾಗಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಮೋದಿ ಅವರು ಪ್ರಧಾನಿಯಾದ ಹತಾಶೆಯಿಂದ ಪ್ರಜಾಪ್ರಭುತ್ವ ವನ್ನು ಹತ್ತಿಕ್ಕುವ ಸಲುವಾಗಿ ರಾಷ್ಟ್ರ ದ್ರೋಹಿಗಳು ನಡೆಸಿದ ಕುಕೃತ್ಯ ಎಂದು ತಿಳಿಸಿದ್ದಾರೆ.
ಇನ್ನು ಈ ಘಟನೆಯನ್ನು ಪಾಕಿಸ್ಥಾನ ಮೂಲದ ಉಗ್ರ ಸಂಘಟನೆ ಟಿಆರ್ಎಫ್ ಮಾಡಿರುವುದಾಗಿ ಒಪ್ಪಿಕೊಂಡಿದೆ. ಈ ಬಗ್ಗೆ ಬರೆದುಕೊಂಡಿರುವ ಟಿಆರ್ಎಫ್, ಜಮ್ಮು ಕಾಶ್ಮೀರ ದಲ್ಲಿ ಯಾವೊಬ್ಬ ಭಾರತೀಯನನ್ನೂ ಜೀವಂತವಾಗಿ ಬಿಡುವುದಿಲ್ಲ. ಇದಕ್ಕಾಗಿಯೇ ಅಜಯ್ ಪಂಡಿತ್ ನನ್ನ ಹತ್ಯೆ ನಡೆಸಿರುವುದಾಗಿ ತಿಳಿಸಿದೆ. ಈ ಕುಕೃತ್ಯದ ಹಿಂದೆ ಸ್ಥಳೀಯ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕೈವಾಡ ಇದೆ ಎಂದು ಸಂದೇಳ ಪಟ್ಟಿರುವ ಪೊಲೀಸರು, ಈ ಪ್ರದೇಶದಲ್ಲಿ ಮತ್ತಷ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.