ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಡಾಖ್ನ ಪರಿಸ್ಥಿತಿಯನ್ನು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಮೂವರು ಸೇನಾ ಮುಖ್ಯಸ್ಥರೊಂದಿಗೆ ಶುಕ್ರವಾರ ಅವಲೋಕಿಸಿದ್ದಾರೆ.
ವರದಿಗಳ ಪ್ರಕಾರ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಡಿಎಸ್ ರಾವತ್ ಮತ್ತು ಮೂವರು ಸೇನಾ ಮುಖ್ಯಸ್ಥರು ಪರಸ್ಪರ ಭೇಟಿಯಾಗಿ ನೈಜ ನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿನ ತಳಮಟ್ಟದ ಪರಿಸ್ಥಿತಿ ಮತ್ತು ಮುಂದೆ ಏನು ಮಾಡಬೇಕೆಂಬುದರ ಬಗ್ಗೆ ಚರ್ಚೆ ನಡೆಸಿದರು.
ಇದು ಒಂದು ವಾರದ ಅವಧಿಯಲ್ಲಿ ರಕ್ಷಣಾ ಸಚಿವರು ನಡೆಸಿದ ಎರಡನೇ ಪರಿಶೀಲನಾ ಸಭೆ ಆಗಿದೆ. ಮೊದಲನೇಯ ಸಭೆ ಜೂನ್ 8ರಂದು ಭಾರತೀಯ ಸೇನೆ ಮತ್ತು ಚೀನಾ ಸೈನ್ಯದ ನಡುವೆ ಲೆಫ್ಟಿನೆಂಟ್ ಜನರಲ್ ಮಟ್ಟದ ಸಭೆ ನಡೆದ ಎರಡು ದಿನಗಳ ಬಳಿಕ ನಡೆದಿತ್ತು.
ಭಾರತ ಮತ್ತು ಚೀನಾದ ಮಿಲಿಟರಿ ನಡುವಿನ ಪ್ರಮುಖ ಸಾಮಾನ್ಯ ಮಟ್ಟದ ಸಭೆಯ ಎರಡು ದಿನಗಳ ನಂತರ ಎರಡನೇಯ ಸಭೆ ಶುಕ್ರವಾರ ನಡೆದಿದೆ.
“ಮಿಲಿಟರಿ ಮಾತುಕತೆಯ ನಂತರ ನೈಜ ನಿಯಂತ್ರಣ ರೇಖೆಯಲ್ಲಿನ ತಳಮಟ್ಟದ ಪರಿಸ್ಥಿತಿಯ ಬಗ್ಗೆ ಇತ್ತೀಚಿನ ಮೌಲ್ಯಮಾಪನಗಳನ್ನು ಮಾಡಲಾಗಿದೆ” ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.
ಸಭೆಯಲ್ಲಿ, ಸಿಡಿಎಸ್ ಜನರಲ್ ರಾವತ್ ಅವರು ಸಚಿವ ಸಿಂಗ್ ಪೂರ್ವ ಲಡಾಖ್ನ ಸ್ಟ್ಯಾಂಡ್-ಆಫ್ ಸೈಟ್ಗಳಲ್ಲಿ ಸೈನ್ಯ ನಿಯೋಜನೆ ಬಗ್ಗೆ ವಿವರಿಸಿದರು.
ರಾಜನಾಥ್ ಸಿಂಗ್ ಅವರು ಅರುಣಾಚಲ ಪ್ರದೇಶ ಸೇರಿದಂತೆ ಇಡೀ ಎಲ್ಎಸಿಯಲ್ಲಿನ ತಳಮಟ್ಟದ ಪರಿಸ್ಥಿತಿಯ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಿದರು. ಎಲ್ಎಸಿಯಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಕಾರ್ಯಗಳ ಬಗ್ಗೆಯೂ ಚರ್ಚಿಸಿದರು ಎನ್ನಲಾಗಿದೆ.
ಭಾರತ ಮತ್ತು ಚೀನಾ ನಡುವಿನ ಪುನರಾವರ್ತಿತ ಸಂವಾದದ ಹಿನ್ನೆಲೆಯಲ್ಲಿ ಈ ಪರಿಶೀಲನಾ ಸಭೆಯನ್ನು ಕರೆಯಲಾಯಿತು. ಉಭಯ ರಾಷ್ಟ್ರಗಳ ನಡುವಣ ಸಂವಾದದಲ್ಲಿ ಗಡಿ ರೇಖೆಯಲ್ಲಿನ ಸಮಸ್ಯೆಯನ್ನು ನಿರಂತರ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳೊಂದಿಗೆ ಪರಿಹರಿಸಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.