ಶಿವಮೊಗ್ಗ: ಶಿವಮೊಗ್ಗ ನಗರದ ಸೋಗಾನೆ ಪ್ರದೇಶದಲ್ಲಿ ಆರಂಭವಾಗಲಿರುವ ನೂತನ ವಿಮಾನ ನಿಲ್ದಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.
ಗೃಹ ಕಛೇರಿ ಕೃಷ್ಣಾದಲ್ಲಿ ಅನ್ಲೈನ್ ಮೂಲಕವೇ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಶಿವಮೊಗ್ಗದ ಜನರ ಬಹುಕಾಲದ ಕನಸು ನನಸಾಗುವ ಕಾಲ ಹತ್ತಿರವಾಗಿದೆ. ನಗರದಲ್ಲಿ ಶೀಘ್ರ ವಿಮಾನ ನಿಲ್ದಾಣ ನಿರ್ಮಾಣವಾಗುವ ಮೂಲಕ ಜನತೆಯ ಅಸೆ ನೆರವೇರಲಿದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್, ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಮೂಲಸೌಕರ್ಯ ವಿಭಾಗದ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಜನತೆಯ ದಶಕಗಳ ಬೇಡಿಕೆಯಾಗಿರುವ ವಿಮಾನ ನಿಲ್ದಾಣ ಕಾಮಗಾರಿ ಸುಮಾರು 220 ಕೋಟಿ ರೂ. ಗಳಲ್ಲಿ ನಡೆಯಲಿದೆ. ಕಾಮಗಾರಿ ನಿರ್ವಹಣೆಗೆ ಈಗಾಗಲೇ ಬೃಹತ್ ಯಂತ್ರಗಳೂ ಸಹ ಕೆಲಸ ಆರಂಭ ಮಾಡಿದ್ದು, ಮುಂದಿನ ದಿನಗಳಲ್ಲಿ ಶಿವಮೊಗ್ಗವನ್ನು ದೇಶ ವಿದೇಶಗಳ ಜನರು ಸಂಪರ್ಕಿಸುವುದಕ್ಕೂ ಇದು ಪೂರಕವಾಗಿ ಕೆಲಸ ಮಾಡಲಿದೆ. ಕಾಂಪೌಂಡ್ ನಿರ್ಮಾಣ, ರನ್ ವೇ, ಕಟ್ಟುವ ನಿರ್ಮಾಣ ಕೆಲಸಗಳಿಗೂ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಚಾಲನೆ ನೀಡಿದ್ದಾರೆ. ಕಾರ್ಮಿಕರು ಸಹ ಭರದಿಂದ ನಿರ್ಮಾಣ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಕಾರ್ಯಕ್ರಮದ ಪ್ರಯುಕ್ತ ಸೋಗಾನೆಯಲ್ಲಿ ಬೃಹತ್ ಪರದೆಯನ್ನು ಅಳವಡಿಸಲಾಗಿದ್ದು, ಆ ಮೂಲಕ ಬಿಎಸ್ವೈ ಚಾಲನೆ ನೀಡುವ ದೃಶ್ಯಗಳನ್ನು ಜನರು ಕಣ್ತುಂಬಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.