ಡೆಹ್ರಾಡೂನ್: ಕೊರೋನಾವೈರಸ್ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಉತ್ತರಾಖಂಡ ಸರ್ಕಾರವು ಕೇವಲ 10 ದಿನಗಳ ಕಡಿಮೆ ಅವಧಿಯಲ್ಲಿ ಇಡೀ ರಾಜ್ಯದ ಜನಸಂಖ್ಯೆಯನ್ನು ಕೋವಿಡ್-19 ಗಾಗಿ ಪರೀಕ್ಷಿಸಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿಯನ್ನು ನೀಡಿರುವ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು, ರಾಜ್ಯದ ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಿಗೆ ರಾಜ್ಯದ ಜನರ ತಪಾಸಣೆಯನ್ನು ಹತ್ತು ದಿನಗಳಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ, ಇದರಿಂದಾಗಿ ಸರಿಯಾದ ಪರಿಸ್ಥಿತಿಯನ್ನು ನಿರ್ಧರಿಸಬಹುದು ಎಂದಿದ್ದಾರೆ.
ಬೃಹತ್ ಕಾರ್ಯವನ್ನು ಸಾಧಿಸಲು, ರಾಜ್ಯ ಆಡಳಿತವು ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿಗಳ ಸಹಾಯವನ್ನು ತೆಗೆದುಕೊಳ್ಳಲಿದೆ.
ಈ ರಾಜ್ಯದ ಕೋವಿಡ್-19 ಪ್ರಕರಣಗಳ ಒಟ್ಟು ಸಂಖ್ಯೆ 1,816 ಕ್ಕೆ ತಲುಪಿದೆ. ರಾಜ್ಯವು ಭಾನುವಾರ 31 ಹೊಸ ಪ್ರಕರಣಗಳನ್ನು ದಾಖಲಿಸಿದೆ.
ಈ ನಡುವೆ, ಕೋವಿಡ್-19 ಮೃತ ದೇಹಗಳ ಶವಸಂಸ್ಕಾರಕ್ಕೆ ಸಂಬಂಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಸಿಎಂ ರಾವತ್ ಅವರು, ಎಲ್ಲಾ ಸುರಕ್ಷತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಶವಸಂಸ್ಕಾರ ಪ್ರಕ್ರಿಯೆಯಲ್ಲಿ ಕೇಂದ್ರದ ಮಾರ್ಗಸೂಚಿಗಳನ್ನು ಸರಿಯಾಗಿ ಅನುಸರಿಸುತ್ತಿರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.