ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಉಭಯ ದೇಶಗಳ ಯೋಧರ ನಡುವೆ ಸಂಘರ್ಷ ತಾರಕಕ್ಕೇರಿದೆ. ಸೈನಿಕರ ನಡುವೆ ನಡೆದ ಮುಷ್ಟಿ ಯುದ್ಧದಲ್ಲಿ ಭಾರತದ ಇಬ್ಬರು ಯೋಧರು ಮತ್ತು ಓರ್ವ ಅಧಿಕಾರಿ ಹುತಾತ್ಮರಾಗಿದ್ದಾರೆ. ಚೀನಾದ ಐವರು ಸೈನಿಕರು ಹತ್ಯೆಯಾಗಿದ್ದಾರೆ ಮತ್ತು 11 ಸೈನಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಮೂಲಗಳು ವರದಿ ಮಾಡಿವೆ.
ಗಾಲ್ವಾನ್ ಕಣಿವೆ ಪ್ರದೇಶದ ಪೆಟ್ರೋಲಿಂಗ್ ಪಾಯಿಂಟ್ 14 ರ ಸಮೀಪದಲ್ಲಿ ಚೀನಾ- ಭಾರತೀಯ ಯೋಧರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಈ ಪ್ರದೇಶದ ಸಂಘರ್ಷಕ್ಕೆ ಸಂಬಂಧಿಸಿದಂತೆ ಮಾತುಕತೆಯೂ ನಡೆಯುತ್ತಿದೆ ಎನ್ನಲಾಗಿದೆ.
“ಗಾಲ್ವಾನ್ ಕಣಿವೆಯಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯಲ್ಲಿ, ನಿನ್ನೆ ರಾತ್ರಿ ಎರಡೂ ಕಡೆ ಸಾವು-ನೋವುಗಳೊಂದಿಗೆ ಹಿಂಸಾತ್ಮಕ ಮುಖಾಮುಖಿ ಸಂಭವಿಸಿದೆ. ಭಾರತದ ಕಡೆಯಿಂದ ಅಧಿಕಾರಿ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಎರಡು ಕಡೆಯ ಹಿರಿಯ ಮಿಲಿಟರಿ ಅಧಿಕಾರಿಗಳು ಪರಿಸ್ಥಿತಿಯನ್ನು ತಗ್ಗಿಸಲು ಪ್ರಸ್ತುತ ಸ್ಥಳದಲ್ಲಿ ಸಭೆ ನಡೆಸುತ್ತಿದ್ದಾರೆ “ಎಂದು ಭಾರತೀಯ ಸೇನೆಯು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಮೂವರು ಸೇನಾ ಮುಖ್ಯಸ್ಥರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ, ಪೂರ್ವ ಲಡಾಕ್ನಲ್ಲಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಗಳು ತಿಳಿಸಿದೆ.
ಚೀನಾದ ಗಡಿಯಲ್ಲಿ ಇಂತಹ ಘಟನೆ ಬಹುಶಃ ಸುಮಾರು 45 ವರ್ಷಗಳ ಹಿಂದೆ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.