ನವದೆಹಲಿ: ಗಾಲ್ವಾನ್ ಗಡಿಯಲ್ಲಿ ಚೀನಾ ಮತ್ತು ಭಾರತೀಯ ಯೋಧರ ನಡುವೆ ಏರ್ಪಟ್ಟ ಸಂಘರ್ಷದಿಂದಾಗಿ ಹುತಾತ್ಮರಾದ ಭಾರತೀಯ ಯೋಧರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ಟ್ವಿಟ್ ಮಾಡಿರುವ ರಾಜನಾಥ್ ಸಿಂಗ್ ಅವರು, “ಗಾಲ್ವಾನ್ನಲ್ಲಿ ಯೋಧರ ಅಗಲುವಿಕೆ ಆಳವಾದ ನೋವನ್ನು ಉಂಟು ಮಾಡಿದೆ. ನಮ್ಮ ಯೋಧರು ಕರ್ತವ್ಯದಲ್ಲಿ ಅಸಾಧಾರಣ ಧೈರ್ಯವನ್ನು ತೋರಿಸುತ್ತಿದ್ದಾರೆ, ಭಾರತೀಯ ಸೇನೆಯ ಅತ್ಯುನ್ನತ ಸಂಪ್ರದಾಯಕ್ಕೆ ಬದ್ಧತೆ ಮೆರೆದಿದ್ದಾರೆ. ಅತ್ಯುನ್ನತವಾದ ಬಲಿದಾನಗೈದಿದ್ದಾರೆ” ಎಂದಿದ್ದಾರೆ.
“ಯೋಧರ ಧೈರ್ಯ ಮತ್ತು ತ್ಯಾಗವನ್ನು ರಾಷ್ಟ್ರವು ಎಂದಿಗೂ ಮರೆಯುವುದಿಲ್ಲ. ಹುತಾತ್ಮ ಸೈನಿಕರ ಕುಟುಂಬಗಳಿಗೆ ನನ್ನ ಹೃದಯ ಮಿಡಿಯುತ್ತದೆ. ಈ ಕಷ್ಟದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ಭುಜದಿಂದ ಭುಜಕೊಟ್ಟು ನಿಲ್ಲುತ್ತದೆ. ಭಾರತದ ಸಾಹಸಿ ಮನಸ್ಸುಗಳ ಧೈರ್ಯ ಮತ್ತು ಶೌರ್ಯದ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದಿದ್ದಾರೆ.
ಗಡಿಯಲ್ಲಿ ಭಾರತ ಮತ್ತು ಚೀನಿ ಯೋಧರ ನಡುವಿನ ಸಂಘರ್ಷ ಅಪಾಯದ ಮಟ್ಟಕ್ಕೇರಿದೆ. ಆಕ್ರಮಣಕಾರಿ ಚೀನಿ ಪಡೆಗಳ ಉದ್ಧಟತನಕ್ಕೆ ಭಾರತೀಯ ಯೋಧರು ದಿಟ್ಟ ಉತ್ತರವನ್ನು ನೀಡಿ ಅವರೊಂದಿಗೆ ಹೋರಾಡುತ್ತಿದ್ದಾರೆ.
ಉಭಯ ಪಡೆಗಳ ನಡುವಿನ ಸಂಘರ್ಷದಿಂದಾಗಿ ಭಾರತ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚೀನಿ ಕಡೆಯಲ್ಲಿ 48 ಸಾವು ಸಂಭವಿಸಿದೆ ಎಂದು ವರದಿಗಳಾಗಿವೆ.
The loss of soldiers in Galwan is deeply disturbing and painful. Our soldiers displayed exemplary courage and valour in the line of duty and sacrificed their lives in the highest traditions of the Indian Army.
— Rajnath Singh (@rajnathsingh) June 17, 2020
The Nation will never forget their bravery and sacrifice. My heart goes out to the families of the fallen soldiers. The nation stand shoulder to shoulder with them in this difficult hour. We are proud of the bravery and courage of India’s breavehearts.
— Rajnath Singh (@rajnathsingh) June 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.