ನವದೆಹಲಿ: ಲಡಾಕ್ ಪ್ರದೇಶದಲ್ಲಿ ಚೀನಾದ ಕುತಂತ್ರ ಬುದ್ಧಿಯಿಂದಾದ ಗಡಿ ಸಂಘರ್ಷದ ಬಗ್ಗೆ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, “ಭಾರತ ಶಾಂತಿಪ್ರಿಯ ರಾಷ್ಟ್ರ. ಆದರೆ ಕಾಲ್ಕೆರೆದುಕೊಂಡು ಯುದ್ಧಕ್ಕೆ ಬಂದರೆ ಸರಿಯಾದ ಪ್ರತ್ಯುತ್ತರ ನೀಡುವುದಕ್ಕೂ ಮುಂದಾಗುತ್ತದೆ” ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡಿದ ಮೋದಿ, “ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ ಅಗತ್ಯಬಿದ್ದರೆ ಪ್ರತಿಕಾರವನ್ನೂ ತೀರಿಸಿಕೊಳ್ಳುತ್ತದೆ. ಕೇಂದ್ರ ಸರ್ಕಾರಕ್ಕೆ ದೇಶದ ಏಕತೆ, ಸಮಗ್ರತೆ ಮುಖ್ಯವಾಗಿದೆ. ದೇಹವನ್ನು ದೇಶಕ್ಕಾಗಿ ಅರ್ಪಣೆ ಮಾಡಿದ ಯೋಧರ ಬಲಿದಾನವನ್ನು ಯಾವುದೇ ಕಾರಣಕ್ಕೂ ವ್ಯರ್ಥವಾಗಲು ಬಿಡುವುದಿಲ್ಲ” ಎಂದಿದ್ದಾರೆ.
ಈ ಸಂದರ್ಭದಲ್ಲಿ ಎರಡು ನಿಮಿಷಗಳ ಕಾಲ ಮೌನಾಚರಣೆಯ ಮೂಲಕ ಮಡಿದ ವೀರಪುತ್ರರಿಗೆ ಗೌರವ ಸಮರ್ಪಣೆ ಮಾಡಲಾಯಿತು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಗೃಹ ಸಚಿವ ಅಮಿತ್ ಶಾ ಮೊದಲಾದವರು ಭಾಗವಹಿಸಿದ್ದರು.
ಪೂರ್ವ ಲಡಾಕ್ ನಲ್ಲಿ ಭಾರತೀಯ ಸೈನಿಕರು ಮತ್ತು ಚೀನಿ ಸೈನಿಕರ ನಡುವೆ ಮಲ್ಲಯುದ್ಧ, ಮುಷ್ಟಿಯುದ್ಧ ನಡೆದಿದ್ದು ,ಈ ಸಂಘರ್ಷದಲ್ಲಿ 20 ಮಂದಿ ಭಾರತದ ಯೋಧರು ಜೀವ ತೆತ್ತಿದ್ದಾರೆ. ಜೊತೆಗೆ 4 ಮಂದಿ ಸೈನಿಕರು ಗಂಭೀರ ಗಾಯಗೊಂಡ ಪರಿಣಾಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೀನಾದ 43 ಮಂದಿ ಸೈನಿಕರನ್ನು ಈ ಸಂದರ್ಭದಲ್ಲಿ ವಧಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ
1975 ರ ಅಕ್ಟೋಬರ್ ನಲ್ಲಿ ನಡೆದಿದ್ದ ಅರುಣಾಚಲ ಪ್ರದೇಶದ ತುಲುಂಗ್ ಲಾ ಸೆಕ್ಟರ್ ಸಂಘರ್ಷದ ಬಳಿಕ ಇದೇ ಮೊದಲ ಬಾರಿಗೆ ಚೀನಾದೊಂದಿಗಿನ ಗಡಿ ಸಂಘರ್ಷದಲ್ಲಿ ಭಾರತೀಯ ಯೋಧರು ವೀರಸ್ವರ್ಗ ಪಡೆದಿದ್ದಾರೆ.
#WATCH — I would like to assure the nation that the sacrifice of our jawans will not be in vain. India wants peace but it is capable to give a befitting reply if instigated: PM Narendra Modi #IndiaChinaFaceOff pic.twitter.com/Z0ynT06dSz
— ANI (@ANI) June 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.