ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಬುಧವಾರ ದೂರವಾಣಿ ಮೂಲಕ ಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ನಾಯಕರು ತಮ್ಮ ದೇಶಗಳಲ್ಲಿ ಬೆಳೆಯುತ್ತಿರುವ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಪರಸ್ಪರ ಮಾತುಕತೆಗಳನ್ನು ನಡೆಸಿದ್ದಾರೆ ಮತ್ತು ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಅಂತರರಾಷ್ಟ್ರೀಯ ಸಹಯೋಗದ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.
ಜಾಗತಿಕ ರೀತಿಯಲ್ಲಿ ಮಾನವೀಯ ಮೌಲ್ಯಗಳನ್ನು ಮುನ್ನಡೆಸುವುದು ಸೇರಿದಂತೆ ಕೋವಿಡ್ ನಂತರದ ಜಗತ್ತಿನ ಒಳ್ಳೆಯದಕ್ಕಾಗಿ ಭಾರತ-ಕೆನಡಾ ಸಹಭಾಗಿತ್ವವು ಒಂದು ಶಕ್ತಿಯಾಗಬಹುದು ಎಂಬುದನ್ನು ಪರಸ್ಪರ ಉಭಯ ನಾಯಕರು ಒಪ್ಪಿಕೊಂಡರು.
ನಾಯಕರು ವಿಶ್ವಸಂಸ್ಥೆ ಸೇರಿದಂತೆ ಬಹುಪಕ್ಷೀಯ ಸಂಸ್ಥೆಗಳನ್ನು ಬಲಪಡಿಸುವ ಅಗತ್ಯವನ್ನು ಒತ್ತಿಹೇಳಿದರು ಮತ್ತು ಆರೋಗ್ಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ವಿಷಯಗಳ ಕುರಿತು ವಿವಿಧ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡರು.
ಕೆನಡಾದಲ್ಲಿರುವ ಭಾರತೀಯ ನಾಗರಿಕರಿಗೆ ಸಹಾಯವನ್ನು ಮಾಡಿದ ಮತ್ತು ಭಾರತಕ್ಕೆ ವಾಪಸಾಗಲು ಅನುಕೂಲವಾಗುವಂತೆ ಮಾಡಿದ ಕೆನಡಾ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಅವರು ಶ್ಲಾಘನೆಗಳನ್ನು ವ್ಯಕ್ತಪಪಡಿಸಿದರು.
ಪ್ರಧಾನ ಮಂತ್ರಿ ಟ್ರುಡೊ ಅವರು ಕೂಡ, ಭಾರತದಿಂದ ಕೆನಡಾದ ನಾಗರಿಕರನ್ನು ಹಿಂದಿರುಗಿಸಲು ಮಾಡಿದ ಸಹಾಯಕ್ಕಾಗಿ ಸಂತೋಷ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.