ನವದೆಹಲಿ: ಭಾರತ-ಚೀನಾ ಗಡಿಯ ಗಾಲ್ವಾನ್ ಕಣಿವೆಯಲ್ಲಿ ಉಭಯ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಯೋಧರ ತ್ಯಾಗ ಮತ್ತು ಬಲಿದಾನವನ್ನು ಇಡೀ ದೇಶ ಸ್ಮರಿಸುತ್ತಿದೆ, ಶ್ರದ್ಧಾಂಜಲಿಗಳನ್ನು ಅರ್ಪಣೆ ಮಾಡುತ್ತಿದೆ.
ಹುತಾತ್ಮರಾದ ಯೋಧರಿಗೆ ಬಿಜೆಪಿ ವಿಶೇಷ ರೀತಿಯಲ್ಲಿ ಶ್ರದ್ಧಾಂಜಲಿಯನ್ನು ಅರ್ಪಣೆ ಮಾಡುತ್ತಿದೆ. ಮುಂದಿನ ಎರಡು ದಿನಗಳ ಕಾಲ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸದಿರಲು ನಿರ್ಧರಿಸಿದೆ. ಆಯೋಜನೆಗೊಂಡಿರುವ ವರ್ಚುವಲ್ ಸಮಾವೇಶಗಳನ್ನು ಕೂಡ ಅದು ರದ್ದುಗೊಳಿಸಿದೆ.
ಈ ಬಗ್ಗೆ ಟ್ವಿಟ್ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಮಾಹಿತಿಯನ್ನು ನೀಡಿದ್ದಾರೆ.
ಟ್ವಿಟ್ ಮಾಡಿರುವ ಅವರು, “ತಾಯ್ನಾಡಿನ ರಕ್ಷಣೆ ಮಾಡುತ್ತಾ ಗಾಲ್ವಾನ್ ಕಣಿವೆಯಲ್ಲಿ ಸರ್ವೋಚ್ಛ ತ್ಯಾಗವನ್ನು ಮಾಡಿದ ವೀರ ಯೋಧರು ಸ್ಮರಣೀಯರಾಗಿದ್ದಾರೆ. ಅವರಿಗೆ ದೇಶ ಚಿರಋಣಿಯಾಗಿದೆ. ಹುತ್ಮಾತರಿಗೆ ಶ್ರದ್ಧಾಂಜಲಿ ಸಮರ್ಪಿಸುತ್ತೇನೆ.ಮುಂದಿನ ಎರಡು ದಿನಗಳ ಕಾಲ ಬಿಜೆಪಿ ವರ್ಚುವಲ್ ಸಮಾವೇಶ ಸೇರಿದಂತೆ ತನ್ನೆಲ್ಲಾ ರಾಜಕೀಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲು ನಿರ್ಧಾರ ಮಾಡಿದೆ” ಎಂದಿದ್ದಾರೆ.
ಭಾರತ ಮತ್ತು ಚೀನಾ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ 20 ಮಂದಿ ಯೋಧರು ಹುತಾತ್ಮರಾದರೆ, ಚೀನಾದ 40ಕ್ಕೂ ಅಧಿಕ ಯೋಧರು ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ.
The supreme sacrifice of our brave soldiers while guarding our motherland in Galwan valley will always be remembered. The nation is indebted to them. I pay homage to the martyrs.
BJP has decided to postpone all its political programmes including virtual rallies for next 2 days.— Jagat Prakash Nadda (@JPNadda) June 18, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.