ನವದೆಹಲಿ: ಕಲ್ಲಿದ್ದಲು ಗಣಿಗಾರಿಕೆ ವಿಚಾರದಲ್ಲಿಯೂ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.
ಖಾಸಗಿ ಕಂಪನಿಗಳಿಗೆ 41 ಕೋಲ್ ಬ್ಲಾಕ್ ಹರಾಜು ಪ್ರಕ್ರಿಯೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
“ವಿಶ್ವದಲ್ಲಿಯೇ ಅತೀ ಹೆಚ್ಚು ಕಲ್ಲಿದ್ದಲು ಹೊಂದಿರುವ ಎರಡನೇಯ ರಾಷ್ಟ್ರ ಭಾರತ. ಆದರೆ ಕಲ್ಲಿದ್ದಲು ಆಮದಿನಲ್ಲಿಯೂ ಸಹ ಎರಡನೇ ಅತೀ ದೊಡ್ಡ ರಾಷ್ಟ್ರವಾಗಿಯೇ ಭಾರತ ಉಳಿದಿದೆ. ಈ ಆಮದು ಪ್ರಕ್ರಿಯೆಗೆ ಪ್ರತಿ ವರ್ಷವೂ ದೇಶದ ಅದೆಷ್ಟೋ ಕೋಟಿ ರೂಪಾಯಿಗಳು ವ್ಯಯವಾಗುತ್ತಿದ್ದು, ಅವೆಲ್ಲಕ್ಕೂ ಪೂರ್ಣ ವಿರಾಮ ಇಡಲು ಮತ್ತು ಕಲ್ಲಿದ್ದಲು ವಿಚಾರದಲ್ಲಿಯೂ ದೇಶವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸುವ ಕಾರ್ಯವನ್ನು ಮಾಡಲು ಕೇಂದ್ರ ಸರ್ಕಾರ ರೂಪು ರೇಷೆಗಳನ್ನು ಹಾಕಿಕೊಂಡಿದೆ” ಎಂದು ಪ್ರಧಾನಿ ತಿಳಿಸಿದ್ದಾರೆ.
“ಇದಕ್ಕಾಗಿ ಖಾಸಗಿ ಕಂಪನಿಗಳಿಗೂ ಕಲ್ಲಿದ್ದಲು ಗಣಿಗಾರಿಕೆಗೆ ಅವಕಾಶ ನೀಡಲಾಗಿದೆ. ಈ ಸಂಬಂಧ 41 ಕೋಲ್ ಬ್ಲಾಕ್ ಗಳ ಹರಾಜು ಪ್ರಕ್ರಿಯೆ ಮಾಡಲಾಗಿದೆ. ದೇಶದ ಆರ್ಥಿಕತೆಯನ್ನು ದೇಶದೊಳಗೇ ಉಳಿಸುವ ಬಳಸುವ ನಿಟ್ಟಿನಲ್ಲಿಯೂ ಇದು ಪೂರಕವಾಗಿ ಕೆಲಸ ಮಾಡಲಿದೆ. ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿಯೂ ದೇಶವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಈ ಮಹತ್ತರ ಕೆಲಸಕ್ಕೆ ಕೈ ಹಾಕಲಾಗಿದೆ” ಎಂದೂ ಮೋದಿ ತಿಳಿಸಿದ್ದಾರೆ.
“2014ರ ಬಳಿಕ ಕಲ್ಲಿದ್ದಲು ಗಣಿಗಾರಿಕೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಸ್ಥೆಯ ಕೊರತೆ ಈ ಹಿಂದೆ ಕಂಡು ಬರುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿವಾರಣೆ ಮಾಡಲಾಗಿದೆ. ಪಾರದರ್ಶಕ ವ್ಯವಹಾರ ನಡೆಯುವಂತೆಯೂ ಗಮನ ವಹಿಸಲಾಗಿದೆ. ಆ ಮೂಲಕ ಈ ಕ್ಷೇತ್ರವನ್ನೂ ಸ್ಪರ್ಧಾತ್ಮಕ ಜಗತ್ತಿಗೆ ತೆರೆದುಕೊಳ್ಳುವಂತೆ ಮಾಡಲಾಗಿದೆ” ಎಂದಿದ್ದಾರೆ.
ಜೊತೆಗೆ ಉದ್ಯಮಿಗಳಿಗೂ ಕಿವಿಮಾತು ಹೇಳಿರುವ ಮೋದಿ, ನೀವು ಒಂದು ಹೆಜ್ಜೆ ಮುಂದಿಡಿ. ನಾನು ನಾಲ್ಕು ಹೆಜ್ಜೆ ಮುಂದಿಟ್ಟು ಯೋಜನೆಗಳಿಗೆ ಕಾರ್ಯರೂಪ ಕೊಡುವ ಮೂಲಕ ದೇಶವನ್ನು ಉನ್ನತ ಸ್ಥಿತಿಯತ್ತ ಕೊಂಡೊಯ್ಯುವುದಾಗಿಯೂ ಭರವಸೆ ನೀಡಿದ್ದಾರೆ.
ಆತ್ಮನಿರ್ಭರ ಭಾರತವನ್ನು ನಿರ್ಮಾಣ ಮಾಡುವುದು 130 ಕೋಟಿ ಭಾರತೀಯರ ಸಂಕಲ್ಪವಾಗಿದೆ. ಸ್ವಾವಲಂಬಿ ಭಾರತದ ಪಯಣವನ್ನು 130 ಕೋಟಿ ಜನರು ಆರಂಭಿಸಿದ್ದಾರೆ, ಇದರಲ್ಲಿ ನಾವೆಲ್ಲರೂ ದೊಡ್ಡ ಭಾಗಿದಾರಿಗಳಾಗಿದ್ದೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.