ನವದೆಹಲಿ: “ಭಾರತವು ಶಾಂತಿಯನ್ನು ಬಯಸುತ್ತದೆ. ಆದರೆ ತನ್ನ ವಿರುದ್ಧ ಕಾಲು ಕೆರೆದುಕೊಂಡು ಜಗಳಕ್ಕೆ ಬರುವ ಯಾರನ್ನೂ ಅದು ಸಹಿಸಿಕೊಳ್ಳುವುದಿಲ್ಲ” ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಭೋಪಾಲ್ನಲ್ಲಿ ಮಾಧ್ಯಮದೊಂದಿಗೆ ಸಂವಾದ ನಡೆಸಿದ ಅವರು, ಚೀನಾ ಬಿಕ್ಕಟ್ಟು, ಕೋವಿಡ್-19 ಸಂಕಷ್ಟ ಮತ್ತು ಫೇಕ್ ಸುದ್ದಿಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು ಎಂದು ವರದಿಗಳು ತಿಳಿಸಿವೆ.
ಸೈನಿಕರ ತ್ಯಾಗದ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು, ಇಡೀ ದೇಶವು ಸೈನಿಕರೊಂದಿಗೆ ನಿಂತಿದೆ ಎಂದು ಹೇಳಿದರು. ನಕಲಿ ಸುದ್ದಿಗಳನ್ನು ಸಹಿಸಲಾಗುವುದಿಲ್ಲ ಎಂದು ಈ ವೇಳೆ ಜಾವ್ಡೇಕರ್ ಹೇಳಿದರು. ಮಾಧ್ಯಮ ಸ್ವಾತಂತ್ರ್ಯವು ನಕಲಿ ಸುದ್ದಿ ಹರಡುವುದಲ್ಲ ಎಂದಿದ್ದಾರೆ.
ನಕಲಿ ಸುದ್ದಿಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಮಾಧ್ಯಮ ಸ್ವಾತಂತ್ರ್ಯವೆಂದರೆ ನಕಲಿ ಸುದ್ದಿಗಳಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.