ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ರಂದು ಚಾಲನೆ ನೀಡಲಿರುವ 50 ಸಾವಿರ ಕೋಟಿ ರೂಪಾಯಿಗಳ ವಲಸಿಗರಿಗಾಗಿನ ಪಿಎಂ ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನದ ವಿವರಗಳನ್ನು ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ಮೂಲಕ ಹಂಚಿಕೊಂಡಿದ್ದಾರೆ.
50,000 ಕೋಟಿ ಮೌಲ್ಯದ ಸಾರ್ವಜನಿಕ ಕಾರ್ಯ ಯೋಜನೆ ವಲಸೆ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ ಎಂದು ಹಣಕಾಸು ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದೆ.
ವಲಸೆ ಕಾರ್ಮಿಕರಿಗೆ ಪರಿಹಾರ ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ರಂದು ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನವನ್ನು ಪ್ರಾರಂಭಿಸುವುದಾಗಿ ಸಚಿವೆ ಘೋಷಿಸಿದರು. ಈ ಯೋಜನೆಯು ತಮ್ಮ ರಾಜ್ಯಗಳಿಗೆ ಮರಳಿದ ವಲಸೆ ಕಾರ್ಮಿಕರಿಗೆ ಈ ಕೊರೊನಾವೈರಸ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜೀವನೋಪಾಯದ ಅವಕಾಶಗಳನ್ನು ಕಂಡುಕೊಳ್ಳಲು ಸಹಾಯ ಮಾಡುತ್ತದೆ ಎಂದಿದ್ದಾರೆ.
ಬೃಹತ್ ಉದ್ಯೋಗ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ 50,000 ಕೋಟಿ ರೂಪಾಯಿಗಳ ಸಂಪನ್ಮೂಲ ಹೊಂದಿಕೆಯೊಂದಿಗೆ ಮೂಲಸೌಕರ್ಯಗಳನ್ನು ಸೃಷ್ಟಿಸುತ್ತದೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಅಭಿಯಾನಕ್ಕೆ ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾದ 116 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ.
ಮನೆಗೆ ತೆರಳಿದ ವಲಸೆ ಕಾರ್ಮಿಕರಿಗೆ ತಕ್ಷಣದ ಪರಿಹಾರ ನೀಡುವುದು ಪಿಎಂ ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನದ ಮೊದಲ ಆದ್ಯತೆಯಾಗಿದೆ ಎಂದು ಸೀತಾರಾಮನ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಪ್ರಕಟಣೆಯ ಪ್ರಕಾರ, ವಲಸೆ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಮತ್ತು ಗ್ರಾಮೀಣ ಮೂಲಸೌಕರ್ಯಗಳನ್ನು ರಚಿಸಲು ಭಾರತ ಯೋಜಿಸಿದೆ.
ಬಾವಿಗಳ ನಿರ್ಮಾಣ, ತೋಟ, ತೋಟಗಾರಿಕೆ, ಅಂಗವಾಡಿ ಕೇಂದ್ರಗಳು, ಗ್ರಾಮೀಣ ವಸತಿ, ಗ್ರಾಮೀಣ ಸಂಪರ್ಕ ಮತ್ತು ಗಡಿ ರಸ್ತೆ ಕಾಮಗಾರಿಗಳು, ರೈಲ್ವೆ ಕಾಮಗಾರಿಗಳು, ಶ್ಯಾಮಪ್ರಸಾದ್ ಮುಖರ್ಜಿ ಅರ್ಬನ್ ಮಿಷನ್, ಪಿಎಂ ಕುಸುಮ್ ಯೋಜನೆಗಳು, ಭಾರತ್ ನೆಟ್ ಅಡಿಯಲ್ಲಿ ಫೈಬರ್ ಆಪ್ಟಿಕ್ ಕೇಬಲ್ ಹಾಕುವುದು, ಜಲ ಜೀವನ್ ಮಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುವುದು ಇತ್ಯಾದಿ.
ವಲಸಿಗರಿಗೆ ಸಮುದಾಯ ಸಂಕೀರ್ಣ, ಗ್ರಾಮ ಪಂಚಾಯಿತಿ ಭವನ, ಹಣಕಾಸು ಆಯೋಗದ ನಿಧಿಗಳು, ರಾಷ್ಟ್ರೀಯ ಹೆದ್ದಾರಿ ಕಾರ್ಯಗಳು, ನೀರಿನ ಸಂರಕ್ಷಣೆ ಮತ್ತು ಕೊಯ್ಲು ಕಾರ್ಯಗಳ ಅಡಿಯಲ್ಲಿ ಕೆಲಸ ಸಿಗಲಿದೆ.
ಗ್ರಾಮಗಳಿಗೆ ಮರಳಿದವರಿಗೆ ಜೀವನೋಪಾಯ ಒದಗಿಸಲು ಸರ್ಕಾರದ ಮೊದಲ ಆದ್ಯತೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.
ಅಭಿಯಾನಕ್ಕೆ ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾದ 116 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಈ ಜಿಲ್ಲೆಗಳು ಅಂತಹ ವಲಸೆ ಕಾರ್ಮಿಕರಲ್ಲಿ ಮೂರನೇ ಎರಡರಷ್ಟು ಭಾಗವನ್ನು ಹೊಂದಿವೆ ಎಂದು ಅಂದಾಜಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.