ಪುಲ್ವಾಮಾ: ಕಳೆದ 24 ಗಂಟೆಗಳಲ್ಲಿ ಎರಡು ಪ್ರತ್ಯೇಕ ಎನ್ಕೌಂಟರ್ ಗಳಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಪಾಕ್ ಪ್ರೇರಿತ 8 ಮಂದಿ ಉಗ್ರರನ್ನು ಭಾರತೀಯ ಯೋಧರು ವಧಿಸಿದ್ದಾರೆ. ಭಾರತದೊಳಕ್ಕೆ ಅಕ್ರಮ ನುಸುಳುವಿಕೆ, ಅಪ್ರಚೋದಿತ ದಾಳಿ, ರಹಸ್ಯ ಕಾರ್ಯಾಚರಣೆಗಳನ್ನು ಮಾಡುತ್ತಿರುವ ಪಾಕಿಸ್ಥಾನದ 8 ಉಗ್ರರನ್ನು ಯಮಪುರಿಗೆ ಅಟ್ಟುವ ಮೂಲಕ ಭಾರತೀಯ ಭದ್ರತಾ ಪಡೆಗಳು ಕುತಂತ್ರಿ ಪಾಕಿಸ್ಥಾನಕ್ಕೆ ಪಾಠ ಕಲಿಸಿದೆ.
ಮೂವರು ಉಗ್ರರನ್ನು ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಹೊಡೆದುರುಳಿಸಲಾಗಿದ್ದರೆ, ಉಳಿದ 5 ಮಂದಿ ಉಗ್ರಗಾಮಿಗಳನ್ನ ಶೋಪಿಯಾನ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಸಂಹರಿಸಿದ್ದಾರೆ ಎಂದು ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆವಂತಿಪೋರಾ ದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಮುಕ್ತಾಯಗೊಳಿಸಿದ್ದು, ಶೋಪಿಯಾನ್ ನಲ್ಲಿ ಮತ್ತಷ್ಟು ಉಗ್ರ ಚಟುವಟಿಕೆಗಳು ನಡೆಯುತ್ತಿರು ಸಂದೇಹವಿದ್ದು, ಕಾರ್ಯಾಚರಣೆ ಮುಂದುವರೆಸಿರುವುದಾಗಿಯೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಎನ್ಕೌಂಟರ್ ಗಳಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂಬುದಾಗಿಯೂ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಆವಂತಿಪೋರಾದಲ್ಲಿ ಮೂವರು ಉಗ್ರಗಾಮಿಗಳನ್ನು ಸಂಹರಿಸಲಾಗಿದೆ. ಓರ್ವನನ್ನು ಮೀಜ್ ನಲ್ಲಿ ಎನ್ಕೌಂಟರ್ ಮಾಡಲಾಗಿದ್ದರೆ, ಮತ್ತಿಬ್ಬರನ್ನು ಗ್ರಾಮದ ಜಾಮಿಯಾ ಮಸೀದಿ ಸಮೀಪದಲ್ಲಿ ಸಂಹರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಬ್ಬರೂ ಉಗ್ರರು ಮಸೀದಿಯೊಳಗೆ ಅಡಗಿಕೊಂಡಿದ್ದರು ಎಂದೂ ಅವರು ತಿಳಿಸಿದ್ದಾರೆ.
ಶೋಪಿಯಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ಒಟ್ಟು 5 ಮಂದಿ ಉಗ್ರರು ವಧಿಸಲ್ಪಟ್ಟಿದ್ದು, ಗುರುವಾರ ಓರ್ವ ಮತ್ತು ಶುಕ್ರವಾರ 4 ಜನರನ್ನು ವಧಿಸಲಾಗಿದೆ. ಮುನಾದ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿರುವ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಸಂಹರಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಸಂಹರಿಸಲ್ಪಟ್ಟ ಉಗ್ರರನ್ನು ಹಿಜ್ಬುಲ್ ಮುಜಾಹಿದ್ದೀನ್, ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಗೆ ಸೇರಿದ ಉಗ್ರರು ಎಂದು ಗುರುತಿಸಲಾಗಿದೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.