ನವದೆಹಲಿ: ಗಾಲ್ವಾನ್ ಕಣಿವೆಯಲ್ಲಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಎತ್ತುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವಿಟರ್ ಮೂಲಕ ಸೂಕ್ತ ಪ್ರತ್ಯುತ್ತರವನ್ನು ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಯೋಧನ ತಂದೆಯ ಬಗೆಗಿನ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
“ವೀರ ಯೋಧನ ತಂದೆ ಮಾತನಾಡಿದ್ದಾರೆ ಮತ್ತು ಅವರ ಮಾತುಗಳಲ್ಲಿ ರಾಹುಲ್ ಗಾಂಧಿ ಅವರಿಗೆ ಸ್ಪಷ್ಟವಾದ ಸಂದೇಶವಿದೆ. ಇಡೀ ದೇಶವೇ ಒಂದಾಗಿರುವ ಸಂದರ್ಭದಲ್ಲಿ, ರಾಹುಲ್ ಗಾಂಧಿ ಅವರು ಕೂಡ ರಾಜಕೀಯವನ್ನು ಮೀರಿ ನಿಲುವ ತೆಗೆದುಕೊಳ್ಳಬೇಕು ಮತ್ತು ಐಕ್ಯಮತ್ಯದೊಂದಿಗೆ ರಾಷ್ಟ್ರೀಯ ಹಿತಾಸಕ್ತಿಯ ಜೊತೆ ನಿಲ್ಲಬೇಕು” ಎಂದು ವಿಡಿಯೋಗೆ ಒಕ್ಕಣೆ ಬರೆದಿದ್ದಾರೆ.
ಈ ವಿಡಿಯೋದಲ್ಲಿ ಗಾಯಗೊಂಡ ಯೋಧನ ತಂದೆ, “ಭಾರತೀಯ ಸೇನೆಯು ಬಲಿಷ್ಠ ಪಡೆಯಾಗಿದೆ ಮತ್ತು ಚೀನಾವನ್ನು ಸೋಲಿಸಬಲ್ಲದ್ದಾಗಿದೆ. ಈ ವಿಷಯವನ್ನು ರಾಹುಲ್ ಗಾಂಧಿ ರಾಜಕೀಯಗೊಳಿಸಬಾರದು, ಇದು ಸರಿಯಾದ ಸಮಯವೂ ಅಲ್ಲ. ನನ್ನ ಮಗ ದೇಶಕ್ಕಾಗಿ ಹೋರಾಡಿದ ಮತ್ತು ಅದನ್ನು ಮುಂದುವರಿಸಲಿದ್ದಾನೆ. ಆತ ಬೇಗ ಗುಣಮುಖನಾಗುತ್ತಾನೆ ಮತ್ತು ದೇಶಕ್ಕಾಗಿ ಸೇವೆ ನೀಡುತ್ತಾನೆ ಎಂಬ ಭರವಸೆ ನನಗಿದೆ” ಎಂದಿದ್ದಾರೆ.
ರಾಹುಲ್ ಗಾಂಧಿ ಟ್ವಿಟ್ ಮಾಡಿ, ಪ್ರಧಾನಿ ಭಾರತದ ಭೂಪ್ರದೇಶವನ್ನು ಚೀನಾದ ಆಕ್ರಮಣಕ್ಕೆ ಒಪ್ಪಿಸಿದ್ದಾರೆ ಎಂದು ಆರೋಪಿಸಿದ್ದರು. ಭಾರತ ಮತ್ತು ಚೀನಾ ನಡುವಿನ ಗಾಲ್ವಾನ್ ಮುಖಾಮುಖಿಯಲ್ಲಿ ಭಾರತೀಯ ಸೈನಿಕರನ್ನು ಏಕೆ ಕೊಲ್ಲಲಾಯಿತು ಎಂದು ಪ್ರಶ್ನೆ ಮಾಡಿದ್ದರು. ಮುಖಾಮುಖಿ ಸಮಯದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ಸ್ಥಳದ ಬಗ್ಗೆಯೂ ಅವರು ಸ್ಪಷ್ಟತೆಯನ್ನು ಕೋರಿದ್ದರು.
ಶುಕ್ರವಾರ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ್ದ ಮೋದಿ, ಭಾರತದ ಗಡಿಯನ್ನು ಯಾರೂ ವಶಪಡಿಸಿಕೊಂಡಿಲ್ಲ ಮತ್ತು ಭಾರತದ ಪೋಸ್ಟ್ಗಳು ಕೂಡ ಯಾರ ವಶದಲ್ಲೂ ಇಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.
A brave armyman’s father speaks and he has a very clear message for Mr. Rahul Gandhi.
At a time when the entire nation is united, Mr. Rahul Gandhi should also rise above petty politics and stand in solidarity with national interest. https://t.co/BwT4O0JOvl
— Amit Shah (@AmitShah) June 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.