ನವದೆಹಲಿ: ಚೀನಾದ ಕುತಂತ್ರಕ್ಕೆ ಬಲಿಯಾಗಿ ವೀರ ಸ್ವರ್ಗ ಪಡೆದ ಭಾರತೀಯ ಯೋಧರ ಬಲಿದಾನವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಭಾರತೀಯ ವಾಯುಸೇನೆ ಯಾವ ಸಂದರ್ಭದಲ್ಲಿ ಬೇಕಾದರೂ ಎಂತಹ ಆಕಸ್ಮಿಕ ಸನ್ನಿವೇಶ ಎದುರಾದರೂ ಅವೆಲ್ಲವನ್ನೂ ಸಮರ್ಥವಾಗಿ ಎದುರಿಸುವ ಶಕ್ತಿಯನ್ನು ಹೊಂದಿದೆ. ಯಾವುದೇ ಸಂದರ್ಭದಲ್ಲಿಯೂ ಚೀನಾಗೆ ಪ್ರತ್ಯುತ್ತರ ನೀಡುವಲ್ಲಿ ಸೇನೆ ಸಮರ್ಥವಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಆರ್ ಕೆ ಎಸ್ ಭದೌರಿಯಾ ಅವರು ಹೇಳಿದ್ದಾರೆ.
ಹೈದರಾಬಾದಿನ ದುಂಡಿಗಲ್ನಲ್ಲಿರುವ ವಾಯುಪಡೆಯ ಅಕಾಡೆಮಿಯಲ್ಲಿ ಸಂಯೋಜಿತ ಪದವಿ ಪರೇಡ್ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗಲ್ವಾನ್ ಗಡಿಯಲ್ಲಿ ನಡೆದ ಸಂಘರ್ಷದ ಸಂದರ್ಭದಲ್ಲಿ ಮಡಿದ ಯೋಧರ ಬಲಿದಾನ ವ್ಯರ್ಥವಾಗುವುದಿಲ್ಲ ಎಂಬ ಭರವಸೆಯನ್ನೂ ಈ ಸಂದರ್ಭದಲ್ಲಿ ನೀಡಿದ ಅವರು, ಯಾವುದೇ ಸಂದರ್ಭದಲ್ಲಿ ಏನೇ ಆಕಸ್ಮಿಕ ಘಟನೆಗಳು ನಡೆದರೂ, ಅವುಗಳನ್ನೆಲ್ಲಾ ಸಮರ್ಥವಾಗಿ ಹತ್ತಿಕ್ಕಲು ಭಾರತೀಯ ರಕ್ಷಣಾ ಪಡೆಗಳು ಶಕ್ತವಾಗಿದೆ. ಸೇನೆ ಭಾರತದ ಸಾರ್ವಭೌಮತೆಯನ್ನು ರಕ್ಷಿಸಲು ಸದಾ ಸಿದ್ಧವಾಗಿದೆ ಎಂದಿದ್ದಾರೆ.
ಭಾರತ ಮತ್ತು ಚೀನಾ ನಡುವೆ ನಡೆದಿರುವ ಎಲ್ಲಾ ಒಪ್ಪಂದಗಳನ್ನು ಗಾಳಿಗೆ ತೂರಿರುವ ಚೀನಾ ವಿನಾ ಕಾರಣ ಗಡಿ ಗಲಾಟೆ ಮಾಡಿದೆ. ಇದರಿಂದಾಗಿ ಪ್ರಾಣಹಾನಿಯೂ ಉಂಟಾಗಿದೆ. ಆದರೂ, ಈ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸುವ ದೃಷ್ಟಿಯಿಂದಲೂ ಪ್ರಯತ್ನಗಳು ಸಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸದ್ಯ ಭಾರತದ ಪರಿಸ್ಥಿತಿ ಹೆಚ್ಚು ಸೂಕ್ಷ್ಮವಾಗಿದ್ದು, ಯಾವುದೇ ಸಂದರ್ಭದಲ್ಲಿಯೂ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಯೋಧರು ಸರ್ವ ಸನ್ನದ್ಧರಾಗಿರುವಂತೆಯೂ ತಿಳಿಸಲಾಗಿದೆ ಎಂದು ಭದೌರಿಯಾ ಮಾಹಿತಿ ನೀಡಿದ್ದಾರೆ.
ಸೋಮವಾರ ಗಲ್ವಾನ್ ಸಂಘರ್ಷದಲ್ಲಿ ಚೀನಾ ಜೊತೆಗಿನ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ವೀರಸ್ವರ್ಗ ಪಡೆದ ಹಿನ್ನೆಲೆಯಲ್ಲಿ ಭದೌರಿಯಾ ಈ ಮಾಹಿತಿ ಹಂಚಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.