ನವದೆಹಲಿ: ಚೀನಾದ ಆಕ್ರಮಣಕಾರಿ ಧೋರಣೆಯನ್ನು ಸದೆಬಡಿಯುವ ಸಲುವಾಗಿ ಭಾರತವು ಗಡಿಯುದ್ದಕ್ಕೂ ಇರುವ ತನ್ನ ಯೋಧರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದೆ ಎಂದು ವರದಿಗಳು ತಿಳಿಸಿವೆ.
ಚೀನಾದ ಯಾವುದೇ ದುಷ್ಕೃತ್ಯವನ್ನು ಪರಿಣಾಮಕಾರಿಯಾಗಿ ಎದುರಿಸಲು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಗಳು ಎಲ್ಎಸಿಯ ಉದ್ದಕ್ಕೂ ತಮ್ಮ ಕಾರ್ಯಾಚರಣೆಯ ಸಾಮರ್ಥ್ಯವನ್ನು ಹೆಚ್ಚಿಸುತ್ತಿವೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿವೆ.
ಭಾರತ-ಚೀನಾ ಗಡಿ ನಿಯೋಜನೆಗೆ ಸಂಬಂಧಿಸಿದಂತೆ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಪೂರ್ವ ಲಡಾಕ್ನಲ್ಲಿ ಮೂವರು ಸೇನಾ ಮುಖ್ಯಸ್ಥರ ನಡುವೆ ಭಾನುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ಅರ್ಧ ಘಂಟೆಯವರೆಗೆ ನಡೆದ ಸಭೆಯಲ್ಲಿ ಲಡಾಖ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು. ರಾಜನಾಥ್ ಅವರು, ಲಡಾಖ್ನಲ್ಲಿ ನಡೆಯುತ್ತಿರುವ ಪರಿಸ್ಥಿತಿ ಅನುಗುಣವಾಗಿ ಸಿಡಿಎಸ್ ಮತ್ತು ಮೂವರು ಸೇನಾ ಮುಖ್ಯಸ್ಥರಿಗೆ ಯಾವುದೇ ಅಭೂತಪೂರ್ವ ಕ್ರಮಕೈಗೊಳ್ಳಲು ಸಂಪೂರ್ಣವಾಗಿ ಸಿದ್ಧರಾಗಿ ಎಂದು ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಗಸ್ತು ಕರ್ತವ್ಯದ ಸಮಯದಲ್ಲಿ ಬಹಳ ಜಾಗರೂಕರಾಗಿರಿ ಮತ್ತು ಚೀನಾದ ಗಡಿಯಲ್ಲಿ ಕಟ್ಟುನಿಟ್ಟಿನ ನಿಗಾವನ್ನು ಹೆಚ್ಚಿಸಿ ಎಂದು ಸೇನೆಗೆ ರಕ್ಷಣಾ ಸಚಿವರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪಡೆಗಳಿಗೆ ಭೂಮಿ ಮತ್ತು ಸಮುದ್ರ ಪಥಗಳಲ್ಲಿ ಸರಿಯಾದ ವೀಕ್ಷಣೆ ನಡೆಸಲು ತಿಳಿಸಲಾಗಿದೆ. ಸಚಿವರು ತಮ್ಮ ರಷ್ಯಾದ ಭೇಟಿಯ ಸಮಯದಲ್ಲಿ ಅಂತಿಮಗೊಳ್ಳಲಿರುವ ಕೆಲವು ನಿರ್ಣಾಯಕ ರಕ್ಷಣಾ ಒಪ್ಪಂದಗಳ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಿದರು. ಜೂನ್ 24 ರಂದು ರಷ್ಯಾಕ್ಕೆ ಭೇಟಿ ರಾಜನಾಥ್ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ಎರಡನೇ ಮಹಾಯುದ್ಧದಲ್ಲಿ ರಷ್ಯಾ ವಿಜಯದ 75 ನೇ ವಾರ್ಷಿಕೋತ್ಸವದ ಅಂಗವಾಗಿ ಮಾಸ್ಕೋದಲ್ಲಿ ಆಯೋಜಿಸಲಾಗುವ ವಿಕ್ಟರಿ ಡೇ ಮಿಲಿಟರಿ ಪೆರೇಡ್ನಲ್ಲಿ ಭಾಗವಹಿಸಲಿದ್ದಾರೆ. ಭಾರತೀಯ ಸೇನಾ ಸಿಬ್ಬಂದಿಯೂ ಇದರಲ್ಲಿ ಭಾಗಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.