ನವದೆಹಲಿ: ಕೊರೋನಾವೈರಸ್ ಪೀಡಿತ ಒಟ್ಟು 2,27,756 ಜನರನ್ನು ಈವರೆಗೆ ಗುಣಪಡಿಸಲಾಗಿದೆ ಮತ್ತು ಚೇತರಿಕೆ ಪ್ರಮಾಣವು ದೇಶದಲ್ಲಿ ಶೇಕಡಾ 55.49 ಕ್ಕೆ ತಲುಪಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ಹೇಳಿದೆ.
ಕಳೆದ 24 ಗಂಟೆಗಳಲ್ಲಿ 13,925 ಜನರು ಕೋವಿಡ್-19 ನಿಂದ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ, ದೇಶದಲ್ಲಿ ಸಕ್ರಿಯ ಕರೋನಾ ಪ್ರಕರಣಗಳ ಸಂಖ್ಯೆ 1,69,451 ಆಗಿದೆ ಎಂದು ವರದಿಗಳು ತಿಳಿಸಿವೆ.
ಒಂದು ದಿನದಲ್ಲಿ, ಒಟ್ಟು 306 ಸಾವುಗಳು ದೇಶಾದ್ಯಂತ ಸಂಭವಿಸಿದೆ ಎಂದು ವರದಿಯಾಗಿದೆ. ಇದರೊಂದಿಗೆ, ದೇಶದಲ್ಲಿ ಸಾವಿನ ಪ್ರಮಾಣವು ಶೇಕಡಾ 3.22 ಕ್ಕೆ ತಲುಪಿದೆ.
ಈ ನಡುವೆ, ದೇಶದ ವಿವಿಧ ಪ್ರಯೋಗಾಲಯಗಳು 24 ಗಂಟೆಗಳ ಒಳಗೆ ಒಟ್ಟು 1,90,730 ಕೊರೊನಾವೈರಸ್ ಮಾದರಿಗಳನ್ನು ಪರೀಕ್ಷೆ ನಡೆಸಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ಐಸಿಎಂಆರ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.