ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ರಷ್ಯಾದ ಮಾಸ್ಕೋಗೆ ಮೂರು ದಿನಗಳ ಪ್ರವಾಸಕ್ಕೆ ತೆರಳಿದ್ದಾರೆ ಮತ್ತು ಅವರ ಭೇಟಿಯ ಸಮಯದಲ್ಲಿ ಭಾರತ-ರಷ್ಯಾ ರಕ್ಷಣಾ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಗಾಢವಾಗಿಸುವ ಮಾರ್ಗಗಳ ಕುರಿತು ಸಿಂಗ್ ಮಾತುಕತೆ ನಡೆಸಲಿದ್ದಾರೆ. ಮಾಸ್ಕೋದಲ್ಲಿ ನಡೆಯಲಿರುವ 75ನೇ ವಿಕ್ಟರಿ ಡೇ ಪೆರೇಡ್ನಲ್ಲಿ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ.
ರಾಜನಾಥ್ ಸಿಂಗ್ ಅವರು ಮಾಸ್ಕೋದಲ್ಲಿ ರಷ್ಯಾದ ಉಪ ಪ್ರಧಾನ ಮಂತ್ರಿ ಯೂರಿ ಬೊರಿಸೊವ್ ಮತ್ತು ರಕ್ಷಣಾ ಸಚಿವ ಸೆರ್ಗೆಯ್ ಶೋಯಿಗು ಅವರನ್ನು ಭೇಟಿಯಾಗಲಿದ್ದಾರೆ ಮತ್ತು ರಷ್ಯಾದ ನಾಯಕರೊಂದಿಗಿನ ಚರ್ಚೆಯ ವೇಳೆ ಅವರು ಎಸ್ -400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳ ವಿತರಣೆಯ ವಿಷಯವನ್ನು ಎತ್ತುವ ನಿರೀಕ್ಷೆ ಇದೆ ಎಂದು ವರದಿಗಳು ತಿಳಿಸಿವೆ.
“ಮೂರು ದಿನಗಳ ಭೇಟಿಗಾಗಿ ನಾನು ಮಾಸ್ಕೋಗೆ ತೆರಳುತ್ತಿದ್ದೇನೆ. ರಷ್ಯಾ ಭೇಟಿ ಭಾರತ-ರಷ್ಯಾ ರಕ್ಷಣಾ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಗಾಢವಾಗಿಸುವ ಮಾರ್ಗಗಳ ಕುರಿತು ಮಾತುಕತೆ ನಡೆಸಲು ನನಗೆ ಈ ಭೇಟಿ ಅವಕಾಶ ನೀಡುತ್ತದೆ. ನಾನು ಮಾಸ್ಕೋದಲ್ಲಿ 75ನೇ ವಿಕ್ಟರಿ ಡೇ ಪೆರೇಡ್ನಲ್ಲಿ ಭಾಗವಹಿಸುತ್ತೇನೆ” ಎಂದು ರಾಜನಾಥ್ ರಷ್ಯಾಗೆ ತೆರಳುವ ಸಂದರ್ಭದಲ್ಲಿ ಟ್ವಿಟ್ ಮೂಲಕ ತಿಳಿಸಿದ್ದಾರೆ.
2021ರ ಡಿಸೆಂಬರ್ ವೇಳೆಗೆ ಭಾರತವು ಎಸ್ -400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಪಡೆಯಬೇಕಿತ್ತು ಆದರೆ ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಅದರ ವಿತರಣೆಯು ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ.
ರಷ್ಯಾ ಭಾರತದ ಅತಿದೊಡ್ಡ ರಕ್ಷಣಾ ಪೂರೈಕೆದಾರ ಮತ್ತು ಕಳೆದ ಎರಡು ವರ್ಷಗಳಲ್ಲಿ, ಉಭಯ ದೇಶಗಳು ಎಸ್ -400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳಿಗೆ 5.2 ಬಿಲಿಯನ್ ಡಾಲರ್ ಒಪ್ಪಂದ ಸೇರಿದಂತೆ ಹಲವಾರು ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.