ನವದೆಹಲಿ: ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ರಾಷ್ಟ್ರದ ಐಕ್ಯತೆಗಾಗಿ ಶ್ರಮಿಸಿದ ರಾಜಕೀಯ ನೇತಾರನಿಗೆ ನಮನಗಳನ್ನು ಸಲ್ಲಿಸಿದ್ದಾರೆ.
ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, “ಭಾರತ ಮಾತೆಯ ಮಹಾನ್ ಪುತ್ರ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಅವರ ಪುಣ್ಯತಿಥಿಯನ್ನು ನಾನು ಗೌರವ ಸಲ್ಲಿಸುತ್ತೇನೆ” ಎಂದಿದ್ದಾರೆ.
ಟ್ವಿಟ್ ಮಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, “ಭಾರತದ ಏಕತೆ ಮತ್ತು ಸಮಗ್ರತೆಯ ಅಸಮಾನ್ಯ ನಾಯಕ ಡಾ.ಮುಖರ್ಜಿ ಅವರು ಸ್ವಾತಂತ್ರ್ಯದ ಮೊದಲು ದೇಶಕ್ಕಾಗಿ ಹೋರಾಡಿದ್ದು ಮಾತ್ರವಲ್ಲದೇ, ಸ್ವಾತಂತ್ರ್ಯದ ನಂತರವೂ ದೇಶದ ಒಗ್ಗಟ್ಟಿಗೆ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಬಂಗಾಳ, ಪಂಜಾಬ್ ಮತ್ತು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವನ್ನಾಗಿ ಮಾಡುವ ಅವರ ದೃಢತೆ ಮತ್ತು ಹೋರಾಟ ಶ್ಲಾಘನೀಯ” ಎಂದಿದ್ದಾರೆ.
ಟ್ವಿಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು, “ಒಂದು ದೇಶದಲ್ಲಿ ಎರಡು ವಿಧಾನ, ಎರಡು ಗುರಿ, ಎರಡು ಪ್ರಧಾನ್ ನಡೆಯಲು ಸಾಧ್ಯವಿಲ್ಲ ಎಂಬ ಘೋಷಣೆಯನ್ನು ಹಾಕುತ್ತಾ ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗಾಗಿ 370 ಮತ್ತು 35 ಎ ಸೆಕ್ಷನ್ಗಳನ್ನು ರದ್ದುಗೊಳಿಸುವ ಪ್ರೇರಣೆಯನ್ನು ನೀಡಿದ ಜನ ಸಂಘದ ಸಂಸ್ಥಾಪಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬಲಿದ ದಿನದಂದು ಕೋಟಿ ಕೋಟಿ ನಮನಗಳು” ಎಂದಿದ್ದಾರೆ.
मां भारती के महान सपूत डॉ. श्यामा प्रसाद मुखर्जी को उनकी पुण्यतिथि पर शत-शत नमन।
— Narendra Modi (@narendramodi) June 23, 2020
भारत की एकता और अखंडता के अप्रतिम नायक डॉ. मुखर्जी ने न केवल स्वतंत्रता से पहले देश के लिए संघर्ष किया, बल्कि स्वतंत्रता के बाद भी देश की एकजुटता के लिए अपने प्राणों को आहूत कर दिया। बंगाल, पंजाब और कश्मीर को भारत का अभिन्न अंग बनाये रखने के लिए उनका तप और संघर्ष वंदनीय है। pic.twitter.com/3MVCBQ4I14
— Amit Shah (@AmitShah) June 23, 2020
'एक देश में दो विधान, दो निशान, दो प्रधान नहीं चलेंगे' का नारा देकर जम्मू-कश्मीर के सर्वांगीण विकास हेतु धारा 370 और 35A को समाप्त करने की प्रेरणा का बीजारोपण करने वाले जनसंघ के संस्थापक डॉ. श्यामा प्रसाद मुखर्जी जी के बलिदान दिवस पर उन्हें कोटि-कोटि नमन। pic.twitter.com/xNsMXnVu67
— Jagat Prakash Nadda (@JPNadda) June 23, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.