ನವದೆಹಲಿ: ದೇಶದಲ್ಲಿ ಕೊರೋನಾ ಚೇತರಿಕೆ ಪ್ರಮಾಣವು ದೇಶದಲ್ಲಿ ಶೇಕಡಾ 56.37 ಕ್ಕೆ ತಲುಪಿದೆ ಮತ್ತು ಕೊರೊನಾವೈರಸ್ ಪೀಡಿತ ಒಟ್ಟು 2 ಲಕ್ಷ 48 ಸಾವಿರ 190 ಜನರನ್ನು ಈವರೆಗೆ ಗುಣಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಹೇಳಿದೆ. ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ, 10 ಸಾವಿರ 994 ಜನರು ಕೋವಿಡ್-19 ನಿಂದ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ, ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 1 ಲಕ್ಷದ 78 ಸಾವಿರದ 14 ಆಗಿದೆ ಎಂದು ವರದಿಗಳು ತಿಳಿಸಿವೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 14 ಸಾವಿರ 933 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಭಾರತದಲ್ಲಿ ಇದುವರೆಗೆ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 4 ಲಕ್ಷ 40 ಸಾವಿರ 215ಕ್ಕೆ ತಲುಪಿದೆ. ಒಂದು ದಿನದಲ್ಲಿ ಒಟ್ಟು 312 ಸಾವುಗಳು ಸಂಭವಿಸಿವೆ. ರಾಷ್ಟ್ರವ್ಯಾಪಿ ಸಾವಿನ ಸಂಖ್ಯೆ 14 ಸಾವಿರದ 11 ಕ್ಕೆ ತಲುಪಿದೆ ಎಂದು ವರದಿಯಾಗಿದೆ. ಇದರೊಂದಿಗೆ, ಸಾವಿನ ಪ್ರಮಾಣವು ದೇಶದಲ್ಲಿ ಶೇಕಡಾ 3.18 ಕ್ಕೆ ತಲುಪಿದೆ.
ಈ ನಡುವೆ ಕೊರೋನಾವೈರಸ್ ಮಾದರಿಗಳನ್ನು ಒಟ್ಟು 1 ಲಕ್ಷ 87 ಸಾವಿರ 233 ಪರೀಕ್ಷೆಗಳನ್ನು 24 ಗಂಟೆಗಳ ಒಳಗೆ ದೇಶದ ವಿವಿಧ ಪ್ರಯೋಗಾಲಯಗಳು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಐಸಿಎಂಆರ್ ತಿಳಿಸಿದೆ. ಈವರೆಗೆ 71 ಲಕ್ಷದ 37 ಸಾವಿರದ 716 ಪರೀಕ್ಷೆಗಳನ್ನು ನಡೆಸಲಾಗಿದೆ.
ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳಿಗೆ ಅನುಮೋದನೆ ನೀಡುವ ಮೂಲಕ ಐಸಿಎಂಆರ್ ಕೋವಿಡ್ -19 ಗಾಗಿ ತನ್ನ ಪರೀಕ್ಷಾ ಸೌಲಭ್ಯಗಳನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಈಗಿನಂತೆ, ಭಾರತದಾದ್ಯಂತದ 726 ಸರ್ಕಾರಿ ಪ್ರಯೋಗಾಲಯಗಳು ಮತ್ತು 266 ಖಾಸಗಿ ಪ್ರಯೋಗಾಲಯಗಳು ಸೇರಿದಂತೆ ಒಟ್ಟು 992 ಪ್ರಯೋಗಾಲಯಗಳಿಗೆ ಕೋವಿಡ್-19 ಪರೀಕ್ಷೆಯನ್ನು ನಡೆಸಲು ಅನುಮೋದನೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.