ನವದೆಹಲಿ: ದೆಹಲಿ ಗಲಭೆ ಪ್ರಕರಣದಲ್ಲಿ ಅಮಾನತುಗೊಂಡ ಎಎಪಿ ಕೌನ್ಸಿಲರ್ ತಾಹಿರ್ ಹುಸೇನ್ನನ್ನು ದೆಹಲಿ ಪೊಲೀಸರು ಹೆಸರಿಸಿದ ಸುಮಾರು 20 ದಿನಗಳ ನಂತರ, ಜಾರಿ ನಿರ್ದೇಶನಾಲಯ (ಇಡಿ)ವು ಮಂಗಳವಾರ ಆರು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತು.
ಇಡಿ ಮೂಲಗಳ ಪ್ರಕಾರ, “ಎನ್ಸಿಆರ್ ಪ್ರದೇಶದಲ್ಲಿನ ಹುಸೇನ್ಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ಇಡಿಯ ಬಹು ತಂಡಗಳು ಶೋಧ ನಡೆಸುತ್ತಿವೆ”ಎಂದು ಹೇಳಿದರು.
ಹಣಕಾಸು ತನಿಖಾ ಸಂಸ್ಥೆ ತಂಡಗಳು ಈಶಾನ್ಯ ದೆಹಲಿಯ ನಾಲ್ಕು ಸ್ಥಳಗಳಲ್ಲಿ ಮತ್ತು ನೋಯ್ಡಾದ ಎರಡು ಸ್ಥಳಗಳಲ್ಲಿ ಶೋಧ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಹುಸೇನ್ ವಿರುದ್ಧ ಹಣಕಾಸು ವಂಚನೆ ಪ್ರಕರಣವನ್ನು ದಾಖಲಿಸಿದ ಸುಮಾರು ಮೂರು ವಾರಗಳ ನಂತರ ಇಡಿ ಕ್ರಮಕೈಗೊಂಡಿದೆ. ದೆಹಲಿಯಲ್ಲಿ ಹಣ ವರ್ಗಾವಣೆ ಮತ್ತು ಗಲಭೆಗಳಿಗೆ ಧನಸಹಾಯ ನೀಡಿದ್ದಕ್ಕಾಗಿ ಇಡಿ ಹುಸೇನ್ ಮತ್ತು ಪಿಎಫ್ಐ ವಿರುದ್ಧ ಪ್ರಕರಣ ದಾಖಲಿಸಿದೆ.
ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಹುಸೇನ್ ಮತ್ತು ಪಿಎಫ್ಐ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಶಾದ್ಯಂತ ಸಿಎಎ ವಿರೋಧಿ ಪ್ರತಿಭಟನೆಗಳಿಗೆ ಧನಸಹಾಯ ನೀಡುವ ಆರೋಪ ಎದುರಿಸುತ್ತಿರುವ ಪಿಎಫ್ಐ ಈಗಾಗಲೇ ಕೇಂದ್ರ ಹಣಕಾಸು ತನಿಖಾ ಸಂಸ್ಥೆಯಿಂದ ವಿಚಾರಣೆಗೆ ಒಳಪಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.