ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರವನ್ನು ಭಾರತದೊಳಗೆ ವಿಲೀನಗೊಳಿಸುವುದು ಪ್ರಸ್ತುತ ಕೇಂದ್ರ ಸರ್ಕಾರ ಉನ್ನತ ಕಾರ್ಯಸೂಚಿಯಾಗಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಮಂಗಳವಾರ ಹೇಳಿದ್ದಾರೆ. ʼಜಮ್ಮು-ಕಾಶ್ಮೀರ ಜನ್ ಸಂವಾದʼ ಸಮಾವೇಶವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿದ ಅವರು, “ಜಮ್ಮು-ಕಾಶ್ಮೀರ ಮತ್ತು ಲಡಾಖ್, ಈಶಾನ್ಯಕ್ಕೆ ನೀಡಿದಂತೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
“ಈಶಾನ್ಯಕ್ಕೆ ಎನ್ಡಿಎ ಆಡಳಿತದಲ್ಲಿ ನೀಡಲಾದ ಪ್ರಾಮುಖ್ಯತೆಯಂತೆ ಜಮ್ಮು-ಕಾಶ್ಮೀರ ಮತ್ತು ಲಡಾಖ್ಗೆ ಸರಿಯಾದ ಪ್ರಾಮುಖ್ಯತೆ ನೀಡುವಂತೆ ನಮಗೆ ಸೂಚನೆ ನೀಡಲಾಗಿದೆ. ಭವಿಷ್ಯದಲ್ಲಿ ಏನಾಗಬಹುದು ಎಂದು ಯಾರೂ ಊಹಿಸಲೂ ಸಾಧ್ಯವಿಲ್ಲ ಮತ್ತು ಹೆಚ್ಚಿನ ಆದ್ಯತೆಯನ್ನು ಪಿಒಕೆ ಅನ್ನು ಭಾರತ ಗಣರಾಜ್ಯದ ಭಾಗವಾಗಿಸುವುದಕ್ಕೆ ನೀಡಲಾಗಿದೆ ಮತ್ತು ಅದನ್ನು ಮಹಾರಾಜ ಹರಿ ಸಿಂಗ್ ಅವರು ನಮಗೆ ನೀಡಿದ ರೂಪಕ್ಕೆ ಮರಳಿ ತರುವುದು ಅಜೆಂಡಾಗಳ ಪಟ್ಟಿಯಲ್ಲಿ ಇದೆ “ಎಂದು ಸಿಂಗ್ ಹೇಳಿದರು.
ಜನಸಂಘ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರು ಮಾಡಿದ ತ್ಯಾಗದ ಬಗ್ಗೆ ಸಿಂಗ್ ಮಾತನಾಡುತ್ತಾ, “ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ರದ್ದುಪಡಿಸಿರುವುದು ಬಿಜೆಪಿ ಕಾರ್ಯಕರ್ತರು ಮಾಡಿದ ತ್ಯಾಗ ಮತ್ತು 68 ವರ್ಷಗಳ ಹೋರಾಟಕ್ಕೆ ಸಿಕ್ಕ ಸೂಕ್ತ ಫಲವಾಗಿದೆ” ಎಂದು ಹೇಳಿದರು.
“ಜಮ್ಮು ಮತ್ತು ಕಾಶ್ಮೀರದಲ್ಲಿ ಏಕೀಕರಣವು ಪ್ರಾರಂಭವಾಗಿದೆ ಮತ್ತು ಓಲೈಕೆಯು ಕ್ಷೀಣಿಸುತ್ತಿದೆ” ಎಂದಿದ್ದಾರೆ.
ಭಾರತೀಯ ಜನ ಸಂಘ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಮರಣ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಅವರ ಹೆಸರನ್ನು ಚೆನಾನಿ-ನಶ್ರಿ ಸುರಂಗದ ಮರುನಾಮಕರಣ ಮಾಡಿದ್ದು ದೇಶಕ್ಕೆ ಅವರು ನೀಡಿದ ಕೊಡುಗೆಗಳಿಗೆ ಗೌರವ ಸಲ್ಲಿಸುತ್ತದೆ ಎಂದು ಸಿಂಗ್ ಹೇಳಿದರು.
ಅನುಮತಿ ಇಲ್ಲದೆ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವೇಶಿಸಿದ ಕಾರಣ ಪೊಲೀಸರು ಬಂಧಿಸಿದ ನಂತರ ಮುಖರ್ಜಿ ಜೂನ್ 23, 1953 ರಂದು ಪೊಲೀಸ್ ಕಸ್ಟಡಿಯಲ್ಲಿ ನಿಧನರಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.