ನವದೆಹಲಿ: ಭಾರತ ಮತ್ತು ರಷ್ಯಾ ನಡುವಿನ ಸಂಬಂಧ ವೃದ್ಧಿಗೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೂರು ದಿನಗಳ ರಷ್ಯಾ ಪ್ರವಾಸ ತೆರಳಿದ್ದಾರೆ. ಮಾಸ್ಕೋದಲ್ಲಿ ನಡೆಯಲಿರುವ ವಿಕ್ಟರಿ ಡೇ ಪೆರೇಡ್ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಆದರೆ ಈ ಸಂದರ್ಭದಲ್ಲಿ ಸಚಿವರು ಚೀನಾದ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂಬ ವರದಿಗಳು ಹರಿದಾಡಿತ್ತು. ಆದರೆ ಭಾರತ ಈ ವರದಿಗಳನ್ನು ತಳ್ಳಿ ಹಾಕಿದೆ.
ಚೀನಾ ಸಚಿವರ ಜೊತೆಗೆ ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದೀಯನ್ನು ಚೀನಾದ ಗ್ಲೋಬಲ್ ಟೈಮ್ಸ್ ವರದಿ ಮಾಡಿದ್ದು, ಗಡಿ ಉದ್ವಿಗ್ನತೆಯ ಕುರಿತು ಮಹತ್ವದ ಸಭೆ ನಡೆಸಲಿದೆ ಎಂದು ತಿಳಿಸಿತ್ತು. ಆದರೆ ಭಾರತದ ರಕ್ಷಣಾ ಸಚಿವಾಲಯದ ವಕ್ತಾರರು ಅಂತಹ ಯಾವುದೇ ಕಾರ್ಯಕ್ರಮಗಳಿಗೆ ರಾಜನಾಥ್ ಸಿಂಗ್ ಒಪ್ಪಿಗೆ ನೀಡಿಲ್ಲ. ಅಲ್ಲದೆ ಚೀನಾ ಜೊತೆಗೆ ಅಂತಹ ಯಾವುದೇ ಸಭೆಯನ್ನು ಆಯೋಜನೆ ಮಾಡಲಾಗಿಲ್ಲ ಎಂದೂ ಮಾಹಿತಿ ನೀಡಿದ್ದಾರೆ.
2ನೇ ವಿಶ್ವಯುದ್ಧದಲ್ಲಿ ಜರ್ಮನ್ ವಿರುದ್ಧ ಸೋವಿಯತ್ ಒಕ್ಕೂಟ ಜಯ ಗಳಿಸಿದ 75 ನೇ ವರ್ಷದ ಅಂಗವಾಗಿ ಮಾಸ್ಕೋ ದಲ್ಲಿ ಆಯೋಜನೆ ಮಾಡಲಾದ ಪಥಸಂಚಲನದಲ್ಲಿ ಭಾರತ ಮತ್ತು ಚೀನಾ ದೇಶಗಳ ರಕ್ಷಣಾ ಸಚಿವರಿಬ್ಬರೂ ಭಾಗವಹಿಸಲಿದ್ದಾರೆ. ಆದರೆ, ಈ ವೇಳೆ ಚೀನಾದೊಂದಿಗೆ ಮಾತುಕತೆ ನಡೆಸಲಿದೆ ಎಂಬ ಚೀನಾದ ವರದಿಯನ್ನು ಭಾರತ ತಳ್ಳಿ ಹಾಕಿದೆ.
ಗಲ್ವಾನ್ ಗಡಿ ಸಮಸ್ಯೆ ಕುರಿತಂತೆ ಕಳೆದ ವಾರವಷ್ಟೇ ಚೀನಾ ಜೊತೆ ಭಾರತೀಯ ವಿದೇಶಾಂಗ ಸಚಿವ ಜಯಶಂಕರ್ ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಆದರೂ ಚೀನಾ ಮತ್ತೆ ಕಾಲ್ಕೆರೆದು ತೊಂದರೆ ನೀಡುತ್ತಲೇ ಬಂದಿದೆ. ಆದ್ದರಿಂದ ಭಾರತದಲ್ಲಿ ಚೀನಾ ಕುತಂತ್ರ ಬುದ್ಧಿಗೆ ತಕ್ಕ ಪಾಠ ಕಲಿಸಲು ಚೀನಾ ವಸ್ತುಗಳ ಬಳಕೆ ನಿಷೇಧ ಕುರಿತಾಗಿಯೂ ಮಹತ್ವದ ಚಿಂತನೆಗಳು ನಡೆಯುತ್ತಿವೆ. ಆತ್ಮ ನಿರ್ಭರ ಭಾರತದ ಮೂಲಕವೇ ಚೀನಾಗೆ ಆರ್ಥಿಕ ಹೊಡೆತವನ್ನು ನೀಡುವ ನಿಟ್ಟಿನಲ್ಲಿಯೂ ಭಾರತ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದು, ಇದು ಚೀನಾಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದೇ ಹೇಳಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.