ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜೂನ್ 26ರಂದು ಒಂದು ಕೋಟಿ ಜನರಿಗೆ ಉದ್ಯೋಗ ಹಸ್ತಾಂತರಿಸುವ ಮೂಲಕ ದಾಖಲೆ ನಿರ್ಮಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿದೆ.
ಈ ಕಾರ್ಯದ ಮೂಲಕ ಉತ್ತರಪ್ರದೇಶವು ಏಕ ಕಾಲದಲ್ಲಿ ಒಂದೇ ಕೋಟಿ ಜನರಿಗೆ ಉದ್ಯೋಗ ನೀಡಿದ ಮೊದಲ ರಾಜ್ಯವಾಗಿ ಹೊರಹೊಮ್ಮಲಿದೆ.
ಆದಿತ್ಯನಾಥ್ ಅವರು ಮಂಗಳವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರ ಇದೇ ಮೊದಲ ಬಾರಿಗೆ ಪಿಎಂ ಮೋದಿ ರಾಜ್ಯಮಟ್ಟದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್ಆರ್ಇಜಿಎಸ್)ಯು ಉತ್ತರಪ್ರದೇಶದಲ್ಲಿ ಸೃಷ್ಟಿಯಾಗುತ್ತಿರುವ ಒಟ್ಟು ಉದ್ಯೋಗಗಳಲ್ಲಿ ಶೇಕಡಾ 50 ಕ್ಕಿಂತ ಹೆಚ್ಚಿನ ಉದ್ಯೋಗಗಳನ್ನು ಖಾತರಿಪಡಿಸಲು ಪ್ರಮುಖ ಕೊಡುಗೆ ನೀಡಲಿದೆ.
“ಉತ್ತರ ಪ್ರದೇಶದಲ್ಲಿ ಸುಮಾರು 1.80 ಕೋಟಿ ಎಂಎನ್ಆರ್ಇಜಿಎ ಉದ್ಯೋಗ ಕಾರ್ಡ್ದಾರರಿದ್ದಾರೆ. ಅವುಗಳಲ್ಲಿ 85 ಲಕ್ಷಗಳು ಸಕ್ರಿಯವಾಗಿವೆ. ಕಳೆದ ಕೆಲವು ತಿಂಗಳುಗಳಲ್ಲಿ ಸುಮಾರು 15 ಲಕ್ಷ ಹೊಸ ಉದ್ಯೋಗ ಕಾರ್ಡ್ಗಳನ್ನು ಸೇರಿಸಲಾಗಿದೆ ಮತ್ತು ಅವರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರಾಗಿದ್ದಾರೆ ”ಎಂದು ಕೇಂದ್ರ ಸರ್ಕಾರದ ಕೇಂದ್ರ ಉದ್ಯೋಗ ಖಾತರಿ ಮಂಡಳಿಯ ಮಾಜಿ ಸದಸ್ಯ ಸಂಜಯ್ ದೀಕ್ಷಿತ್ ಹೇಳಿದ್ದಾರೆ.
ನದಿಯ ಪುನರುಜ್ಜೀವನ, ಗ್ರಾಮೀಣ ರಸ್ತೆಗಳ ನಿರ್ಮಾಣ, ಕೊಳಗಳು ಮತ್ತು ಹೊಂಡಗಳನ್ನು ಅಗೆಯುವುದು, ಗಿಡ ನೆಡುವಿಕೆ ಮತ್ತು ಇತರ ಕೆಲಸಗಳನ್ನು ಗ್ರಾಮೀಣ ಉದ್ಯೋಗ ಯೋಜನೆಯಡಿ ಜನರಿಗೆ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.