ನವದೆಹಲಿ: ಭಾರತೀಯ ರೈಲ್ವೆಯು ಮುಂದಿನ 125 ದಿನಗಳಲ್ಲಿ ವಲಸಿಗರಿಗಾಗಿ 8 ಲಕ್ಷ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಿದೆ ಮತ್ತು 1800 ಕೋಟಿ ರೂಪಾಯಿಗಳ ಮೂಲ ಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದೆ.
ರೈಲ್ವೆ ಸಚಿವಾಲಯವು ವಲಯ ರೈಲ್ವೆಗಳೊಂದಿಗೆ ಮತ್ತು ರೈಲ್ವೆ ಪಿಎಸ್ಯುಗಳೊಂದಿಗೆ ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲಿಸಲಿದೆ.
ಉತ್ತರಪ್ರದೇಶ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ, ಒರಿಸ್ಸಾ, ಜಾರ್ಖಂಡ್ ರಾಜ್ಯಗಳ 116 ಜಿಲ್ಲೆಗಳಲ್ಲಿ ಗ್ರೀಸ್ ಕಲ್ಯಾಣ್ ರೋಜ್ಗಾರ್ ಅಭಿಯಾನ ಅನುಷ್ಠಾನದಲ್ಲಿದೆ. ರೈಲ್ವೆ ಮಂಡಳಿ ಮುಖ್ಯಸ್ಥ ವಿನೋದ್ ಕುಮಾರ್ ಯಾದವ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯ ನೇತೃತ್ವ ವಹಿಸಿದ್ದಾರೆ. ಇದರಲ್ಲಿ ಪ್ರಧಾನ ನಿರ್ದೇಶಕರು, ವಲಯ ರೈಲ್ವೆ ನಿರ್ವಾಹಕರು, ಪಿಎಸ್ಯುಗಳ ಮ್ಯಾನೇಜಿಂಗ್ ಡೈರೆಕ್ಟರ್ಗಳು ಭಾಗಿಯಾಗಿದ್ದಾರೆ.
125 ದಿನಗಳ ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನವು 25 ವಿಭಾಗಗಳ ಕೆಲಸವನ್ನು ಹೊಂದಿರಲಿದೆ. 116 ಜಿಲ್ಲೆಗಳಲ್ಲಿ ಚಟುವಟಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.