ಲಕ್ನೋ : ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸಲು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಕೈಗಾರಿಕಾ ಸಂಘಗಳೊಂದಿಗೆ ಸಹಭಾಗಿತ್ವವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ‘ಆತ್ಮನಿರ್ಭರ್ ಯುಪಿ ರೋಜ್ಗಾರ್ ಅಭಿಯಾನ’ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟನೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಪ್ರಧಾನಿಯನ್ನು ಸ್ವಾಗತಿಸಿದರು ಮತ್ತು ಉಪಕ್ರಮವನ್ನು ಕೈಗೊಂಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. “ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದ ಉದ್ಯೋಗ ಕಳೆದುಕೊಂಡ 1.25 ಕೋಟಿಗೂ ಹೆಚ್ಚು ವಲಸೆ ಕಾರ್ಮಿಕರು ಈ ವಿಶಿಷ್ಟ ಉಪಕ್ರಮದಿಂದ ಪ್ರಯೋಜನ ಪಡೆಯುವ ಸಾಧ್ಯತೆಯಿದೆ. 35 ಲಕ್ಷಕ್ಕೂ ಹೆಚ್ಚು ವಲಸಿಗರು ಉತ್ತರ ಪ್ರದೇಶಕ್ಕೆ ಮರಳಿದರು ಮತ್ತು 30 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಸಹ ಕೌಶಲ್ಯ ಮ್ಯಾಪಿಂಗ್ ವ್ಯಾಪ್ತಿಗೆ ಒಳಪಡಿಸಲಾಗಿದೆ” ಎಂದು ಹೇಳಿದರು.
ವರ್ಚುವಲ್ ಉದ್ಘಾಟನೆಯಲ್ಲಿ ಮೋದಿ ಉತ್ತರ ಪ್ರದೇಶದ ಆರು ಜಿಲ್ಲೆಗಳ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಸಾಮಾನ್ಯ ಸೇವಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮಗಳು ಈ ಕಾರ್ಯಕ್ರಮಕ್ಕೆ ಸೇರಿಕೊಂಡವು.
ವಿವಿಧ ಕ್ಷೇತ್ರಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತ ಪ್ಯಾಕೇಜ್ ಘೋಷಿಸಿತು. ದೇಶದ ಹಿಂದುಳಿದ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ರಚಿಸುವ ನಿಟ್ಟಿನಲ್ಲಿ ಉದ್ಯೋಗವನ್ನು ಸೃಷ್ಟಿಸುವ ಸಲುವಾಗಿ, ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನವನ್ನು ಜೂನ್ 20 ರಂದು ಪ್ರಾರಂಭಿಸಲಾಯಿತು.
ಕೈಗಾರಿಕೆ ಮತ್ತು ಇತರ ಸಂಸ್ಥೆಗಳೊಂದಿಗೆ ಸಹಭಾಗಿತ್ವವನ್ನು ಸೃಷ್ಟಿಸುವುದಲ್ಲದೇ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಉತ್ತೇಜಿಸುವ ‘ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗಾರ್ ಅಭಿಯಾನ’ ಎಂಬ ವಿಶಿಷ್ಟ ಉಪಕ್ರಮವನ್ನು ಉತ್ತರ ಪ್ರದೇಶ ಸರ್ಕಾರ ರೂಪಿಸಿದೆ.
ಅಭಿಯಾನವು ಉದ್ಯೋಗವನ್ನು ಒದಗಿಸುವ ಮತ್ತು ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸುವತ್ತ ಹೆಚ್ಚು ಕೇಂದ್ರೀಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.