ಗ್ಲಾಸ್ಗೋ: ಗಡಿಪಾರುಗೊಂಡು ಯುಕೆಯ ಗ್ಲಾಸ್ಗೋದಲ್ಲಿ ವಾಸಿಸುತ್ತಿರುವ ಪಿಒಕೆ ರಾಜಕೀಯ ಕಾರ್ಯಕರ್ತರೊಬ್ಬರು, ಲಡಾಖ್ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಚೀನಾದ ಆಕ್ರಮಣಶೀಲತೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಭಾರತೀಯ ಸೇನೆಗೆ ಬೆಂಬಲ ನೀಡುವ ಪ್ರತಿಜ್ಞೆ ಮಾಡಿದ್ದಾರೆ.
ಪಿಒಕೆಯ ಮಿರ್ಪುರ್ ಮೂಲದ ಅಮ್ಜದ್ ಅಯೂಬ್ ಮಿರ್ಜಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “70 ವರ್ಷಗಳಿಂದ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಗಿಲ್ಗಿಟ್ ಬಲ್ತಿಸ್ಥಾನ್ ಜನರನ್ನು ಭಾರತದಿಂದ ಪ್ರತ್ಯೇಕವಾಗಿ ಇರಿಸಲಾಗಿದೆ. ಚೀನಾದ ಆಕ್ರಮಣದಿಂದಾಗಿ ಭಾರತವು ಕಠಿಣ ಸಮಯವನ್ನು ಎದುರಿಸುತ್ತಿದೆ. ಚೀನಾ ಪಾಕಿಸ್ಥಾನ ಮತ್ತು ನೇಪಾಳದ ಕಮ್ಯುನಿಸ್ಟ್ ಪಕ್ಷದ ಜೊತೆಗೆ ಕೊಳಕು ಆಟ ಆಡುತ್ತಿದೆ. ನಾವು ಮೌನವಾಗಿ ಕುಳಿತುಕೊಳ್ಳುವುದಿಲ್ಲ ಮತ್ತು ಭಾರತದೊಂದಿಗೆ ಭುಜಕ್ಕೆ ಭುಜ ಕೊಟ್ಟು ನಿಲ್ಲುತ್ತೇವೆ” ಎಂದಿದ್ದಾರೆ.
“ನಾನು ವೈಯಕ್ತಿಕವಾಗಿ ಭಾರತಕ್ಕಾಗಿ ಹೋರಾಡುತ್ತೇನೆ ಮತ್ತು ಭಾರತೀಯ ಸೇನಾ ಸಿಬ್ಬಂದಿಯ ರಕ್ತ ಎಲ್ಲೆಲ್ಲಿ ಚೆಲ್ಲುತ್ತದೆ ಅಲ್ಲಿ ನಾವು ಸಹ ಶತ್ರುಗಳ ವಿರುದ್ಧ ಹೋರಾಡುತ್ತೇವೆ” ಎಂದು ಅವರು ಹೇಳಿದ್ದಾರೆ.
ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಹಿಂಸಾತ್ಮಕ ಮುಖಾಮುಖಿ ನಡೆಸಿದ್ದಕ್ಕಾಗಿ ಭಾರತ ಚೀನಾವನ್ನು ಜವಾಬ್ದಾರಿಯುತವಾಗಿ ಎದುರಿಸಿತು, ಚೀನಾ ಒಪ್ಪಿದ ಮಾನದಂಡಗಳನ್ನು ಉಲ್ಲಂಘಿಸಿ ನೈಜ ನಿಯಂತ್ರಣ ರೇಖೆಯ ಉದ್ದಕ್ಕೂ ಸೈನ್ಯವನ್ನು ಒಟ್ಟುಗೂಡಿಸಿದೆ ಎಂದು ಆರೋಪಿಸಿದರು.
ಜೂನ್ 15 ರ ದಾಳಿಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರೆ, ಚೀನಾದ ಪಿಎಲ್ಎ ಕೂಡ ಹಲವಾರು ಸಾವುನೋವುಗಳನ್ನು ಅನುಭವಿಸಿದೆ ಎಂದು ವರದಿಗಳು ಸೂಚಿಸುತ್ತವೆ. ಆದರೂ, ಗಡಿ ಘರ್ಷಣೆಯಲ್ಲಿ ಕೊಲ್ಲಲ್ಪಟ್ಟ ತನ್ನ ಸೈನಿಕರ ಸಂಖ್ಯೆಯನ್ನು ಬೀಜಿಂಗ್ ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
“ಚೀನಾ ದೊಡ್ಡ ತಪ್ಪು ಮಾಡಿದೆ ಮತ್ತು ಅವರು ಭಾರತದಲ್ಲಿನ 1.35 ಶತಕೋಟಿ ಜನರನ್ನು ಮತ್ತು ಪಿಒಕೆ ಮತ್ತು ಗಿಲ್ಗಿಟ್ ಬಲ್ತಿಸ್ತಾನದಲ್ಲಿ ವಾಸಿಸುವವರನ್ನು ಪ್ರಚೋದಿಸಿದ್ದಾರೆ. ಅಗತ್ಯವಿದ್ದಲ್ಲಿ, ನಾವು ಶತ್ರುಗಳ ವಿರುದ್ಧ ಹೋರಾಡಲು ಯುದ್ಧಭೂಮಿಯಲ್ಲಿ ಭಾರತೀಯ ಸೇನೆಯನ್ನು ಸೇರುತ್ತೇವೆ” ಎಂದು ಮಿರ್ಜಾ ಹೇಳಿದರು.
ಚೀನಾದ ಆಕ್ರಮಣಶೀಲತೆ ಮತ್ತು ಅಂತರರಾಷ್ಟ್ರೀಯ ಗಡಿ ಕಾನೂನುಗಳ ಉಲ್ಲಂಘನೆಯ ವಿರುದ್ಧ ವಿಶ್ವ ಶಕ್ತಿಗಳು ಭಾರತದೊಂದಿಗೆ ನಿಂತಿವೆ.
ಚೀನಾದ ಸೈನ್ಯದ ಪ್ರಚೋದನಕಾರಿ ಮಿಲಿಟರಿ ಕ್ರಮಗಳ ಬಗ್ಗೆ ಈ ತಿಂಗಳ ಆರಂಭದಲ್ಲಿ ಯುರೋಪಿಯನ್ ಯೂನಿಯನ್ (ಇಯು) ವಿದೇಶಾಂಗ ಮಂತ್ರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಯುನೈಟೆಡ್ ಸ್ಟೇಟ್ಸ್ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.