ಶ್ರೀನಗರ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಕ್ಷಿಣ ಕಾಶ್ಮೀರದ ಭಯೋತ್ಪಾದನೆ ಪೀಡಿತ ಟ್ರಾಲ್ ಪ್ರದೇಶವನ್ನು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಿಂದ ಮುಕ್ತ ಪ್ರದೇಶ ಎಂದು ಘೋಷಿಸಿದ್ದಾರೆ. ಇಲ್ಲಿ 1989ರಿಂದ ಮೂರು ದಶಕಗಳ ಬಳಿಕ ಇಂತಹ ಸಕಾರಾತ್ಮಕ ಬೆಳವಣಿಗೆ ನಡೆದಿದೆ ಎಂದು ವರದಿಗಳು ತಿಳಿಸಿವೆ.
“ಇಂದಿನ ಯಶಸ್ವಿ ಕಾರ್ಯಾಚರಣೆಯ ನಂತರ, ಟ್ರಾಲ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರ ಉಪಸ್ಥಿತಿ ಉಳಿದುಕೊಂಡಿಲ್ಲ. ಇದು 1989 ರ ನಂತರ ಮೊದಲ ಬಾರಿಗೆ ಇದು ಸಂಭವಿಸಿದೆ ”ಎಂದು ಜಮ್ಮು-ಕಾಶ್ಮೀರ ಪೊಲೀಸ್ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಟ್ರಾಲ್ ಹಿಜ್ಬುಲ್ ಮುಜಾಹಿದ್ದೀನ್ ಪೋಸ್ಟರ್ ಬಾಯ್ , ಭಯೋತ್ಪಾದಕ ಕಮಾಂಡರ್ ಬುರ್ಹಾನ್ ವಾನಿಯ ತವರೂರು ಆಗಿತ್ತು. ಈತನನ್ನು ಭದ್ರತಾ ಪಡೆಗಳು ಎನ್ಕೌಂಟರ್ ಮಾಡಿದ ಬಳಿಕ ಇಲ್ಲಿ ದೊಡ್ಡ ಮಟ್ಟದ ದೊಂಬಿ ಭುಗಿಲೆದ್ದಿತ್ತು.
ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸುವ ಸಲುವಾಗಿ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಭಾರತೀಯ ಸೇನೆ, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರನ್ನು ಒಳಗೊಂಡ ಭದ್ರತಾ ಪಡೆಗಳು ಕಣಿವೆಯಲ್ಲಿ ದೊಡ್ಡ ಮಟ್ಟದಲ್ಲಿ ಪರಿಶ್ರಮಪಡುತ್ತಿವೆ.
2020ರಲ್ಲಿ ಭದ್ರತಾ ಪಡೆಗಳು 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಗುಂಡಿಕ್ಕಿ ಸಂಹರಿಸಿವೆ. ಈಗಾಗಲೇ ಜೂನ್ನಲ್ಲಿ 35 ಕ್ಕೂ ಹೆಚ್ಚು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.