ನವದೆಹಲಿ: ಕೊರೋನಾ ಕಾರಣದಿಂದಾಗಿ ರಾಷ್ಟ್ರವ್ಯಾಪಿಯಾಗಿ ವಿಧಿಸಲಾಗಿದ್ದ ಲಾಕ್ ಡೌನ್ ಅವಧಿಯಲ್ಲಿ ದೇಶಾದ್ಯಂತ ಅಗತ್ಯ ವಸ್ತುಗಳನ್ನು ಸಾಗಿಸುವ ಮೂಲಕ ರಾಷ್ಟ್ರಕ್ಕೆ ಜೀವಸೆಲೆಯಾಗಿ ಕಾರ್ಯನಿರ್ವಹಿಸಿದೆ ಭಾರತೀಯ ರೈಲ್ವೆ. ವಿಮಾನಗಳ ನಂತರ, ರೈಲ್ವೆಯು ಸರಕುಗಳ ಸಾಗಾಣೆಯಲ್ಲಿ ಅತೀ ಕ್ಷಿಪ್ರ ಅಂತರ-ರಾಜ್ಯ ಸಾರಿಗೆಯಾಗಿ ಹೊರಹೊಮ್ಮಿತು.
ರೈಲ್ವೆ ಸಚಿವಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಆರ್ ಡಿ ಬಾಜ್ಪೈ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪಾರ್ಸೆಲ್ ವಿಶೇಷ ರೈಲುಗಳು ಮತ್ತು ಸರಕು ರೈಲುಗಳು ದೇಶಾದ್ಯಂತ ಎಲ್ಲಾ ಅಗತ್ಯ ಸರಕುಗಳು ಅಡೆತಡೆಯಿಲ್ಲದೆ ಪೂರೈಸುತ್ತಿರುವುದನ್ನು ಖಚಿತಪಡಿಸುತ್ತಿದೆ ಎಂದು ಹೇಳಿದ್ದಾರೆ.
ರೈಲ್ವೆ ತನ್ನ ಸಾವಿರಾರು ಬೋಗಿಗಳನ್ನು ಪ್ರತ್ಯೇಕ ವಾರ್ಡ್ಗಳಾಗಿ ಪರಿವರ್ತಿಸಿದೆ ಮತ್ತು ವೈಯಕ್ತಿಕ ರಕ್ಷಣಾ ಸಾಧನಗಳು, ಮುಖಗವಸುಗಳು ಮತ್ತು ಸ್ಯಾನಿಟೈಜರ್ಗಳನ್ನು ತಯಾರಿಸುತ್ತಿದೆ ಎಂದು ಅವರು ಹೇಳಿದರು.
ಕೋವಿಡ್-19 ಲಾಕ್ಡೌನ್ ಅವಧಿಯಲ್ಲಿ 200ಕ್ಕೂ ಹೆಚ್ಚು ಬಾಕಿ ಉಳಿದಿದ್ದ ನಿರ್ವಹಣಾ ಯೋಜನೆಗಳನ್ನು ರೈಲ್ವೆ ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ವರದಿಗಳು ತಿಳಿಸಿವೆ. ಇದು ಹಳಿಗಳ ಪ್ರಮುಖ ವಿಭಾಗಗಳಲ್ಲಿ ರೈಲು ಕಾರ್ಯಾಚರಣೆಯ ಸುರಕ್ಷತೆ ಮತ್ತು ವೇಗವನ್ನು ಹೆಚ್ಚಿಸಿದೆ ಎಂದು ವರದಿಗಳು ತಿಳಿಸಿವೆ.
ರೈಲ್ವೆ ದೇಶಾದ್ಯಂತ 4,000 ಕ್ಕೂ ಹೆಚ್ಚು ಶ್ರಮಿಕ್ ವಿಶೇಷ ರೈಲುಗಳನ್ನು ಕಾರ್ಯಗತಗೊಳಿಸಿದೆ ಮತ್ತು 60 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ಅವರ ತವರು ರಾಜ್ಯಗಳಿಗೆ ಸಾಗಿಸಿದೆ. ಈ ವಿಶೇಷ ರೈಲುಗಳಲ್ಲಿ ಪ್ರಯಾಣಿಸುವ ವಲಸಿಗರಿಗೆ ರೈಲ್ವೆ ಉಚಿತ ಊಟ ಮತ್ತು ಉಚಿತ ನೀರಿನ ಬಾಟಲಿಗಳನ್ನು ವಿತರಿಸಿದೆ.
ಶ್ರಮಿಕ್ ವಿಶೇಷ ರೈಲುಗಳ ಜೊತೆಗೆ, ರೈಲ್ವೆ 15 ಜೋಡಿ ವಿಶೇಷ ಎಸಿ ರೈಲುಗಳು ಮತ್ತು 200 ವಿಶೇಷ ರೈಲುಗಳನ್ನು ಓಡಿಸುತ್ತಿದೆ. ರೈಲ್ವೆ ರಾಜ್ಯ ಸರ್ಕಾರಗಳ ಆರೋಗ್ಯ ರಕ್ಷಣಾ ಪ್ರಯತ್ನಗಳಿಗೆ ಪೂರಕವಾಗಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.
ಒಟ್ಟು 5,231 ರೈಲು ಬೋಗಿಗಳನ್ನು ಕೋವಿಡ್ ಆರೈಕೆ ಕೇಂದ್ರಗಳಾಗಿ ಬಳಸಲು ಮಾರ್ಪಡಿಸಲಾಗಿದೆ. ದೆಹಲಿ, ಉತ್ತರ ಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಧ್ಯಪ್ರದೇಶದ 5 ರಾಜ್ಯಗಳಲ್ಲಿ ರೈಲ್ವೆ 960 ಕೋವಿಡ್ ಕೇರ್ ಬೋಗಿಗಳನ್ನು ನಿಯೋಜಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ರೈಲ್ವೆ ಮುಂಚೂಣಿ ವೈದ್ಯಕೀಯ ಕಾರ್ಯಕರ್ತರಿಗೆ ಮತ್ತು ಇತರ ಕಾರ್ಯಾಚರಣಾ ಸಿಬ್ಬಂದಿಗೆ ರಕ್ಷಣೆ ನೀಡುವ ಕಾರ್ಯವನ್ನು ಕೂಡ ಮಾಡುತ್ತಿದೆ.
ರೈಲ್ವೆ ವರ್ಕ್ಶಾಪ್ಗಳು ಲಾಕ್ ಡೌನ್ ಅವಧಿಯಲ್ಲಿ ಸುಮಾರು ಎರಡು ಲಕ್ಷ ವೈಯಕ್ತಿಕ ರಕ್ಷಣಾ ಸಾಧನಗಳು, ಪಿಪಿಇ ನಕಿಟ್ಗಳು ಮತ್ತು ಏಳು ಲಕ್ಷಕ್ಕೂ ಹೆಚ್ಚು ಮುಖಗವಸುಗಳನ್ನು ಉತ್ಪಾದಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.