ಡೆಹ್ರಾಡೂನ್: ಜುಲೈ 1 ರಿಂದ ಉತ್ತರಾಖಂಡ ರಾಜ್ಯ ಸರ್ಕಾರ ಚಾರ್ ಧಾಮ್ ಯಾತ್ರೆಯನ್ನು ಪ್ರಾರಂಭಿಸಲಿದೆ, ಆದರೆ ರಾಜ್ಯದ ಯಾತ್ರಾರ್ಥಿಗಳಿಗೆ ಮಾತ್ರ ದೇವಾಲಯಗಳಿಗೆ ಭೇಟಿ ನೀಡಲು ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಾರ್ ಧಾಮ್ ದೇವಸ್ಥಾನಂ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ರವಿನಾಥ್ ರಾಮನ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, “ಎಲ್ಲಾ ಮುನ್ನೆಚ್ಚರಿಕೆಗಳೊಂದಿಗೆ ಜುಲೈ 1 ರಿಂದ ಯಾತ್ರೆ ಪ್ರಾರಂಭವಾಗಲಿದೆ. ಎಲ್ಲಾ ಯಾತ್ರಾರ್ಥಿಗಳಿಗೆ ಸುರಕ್ಷತೆ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ.
ನಾಲ್ಕು ದೇವಾಲಯಗಳ ಪೈಕಿ ಒಂದಕ್ಕೆ ಭೇಟಿ ನೀಡಲು ಬಯಸುವವರು ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಮತ್ತು ನಂತರವೇ ಸ್ಥಳೀಯ ಆಡಳಿತವು ಅವರಿಗೆ ಅನುಮತಿ ನೀಡುತ್ತದೆ ಎಂದು ವರದಿಗಳು ತಿಳಿಸಿವೆ.
ರುದ್ರಪ್ರಯಾಗ್ (ಕೇದಾರನಾಥ), ಉತ್ತರ್ಕಶಿ (ಗಂಗೋತ್ರಿ, ಯಮುನೋತ್ರಿ) ಮತ್ತು ಚಮೋಲಿ (ಬದ್ರಿನಾಥ್) ಜಿಲ್ಲೆಯಲ್ಲಿರುವ ದೇವಾಲಯಗಳಿಗೆ ಕೊರೋನಾ ಕಂಟೋನ್ಮೆಂಟ್ ವಲಯಗಳ ಅಥವಾ ಆ ಜಿಲ್ಲೆಗಳ ಹೊರಗಿನ ಯಾರಿಗೂ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಯಾತ್ರಿಕರ ಸಂಖ್ಯೆಯನ್ನು ಕೇದಾರನಾಥಕ್ಕೆ 800, ಬದ್ರಿನಾಥ್ಗೆ 1200, ಗಂಗೋತ್ರಿ 600 ಮತ್ತು ಯಮುನೋತ್ರಿ ದೇಗುಲಕ್ಕೆ 400 ಎಂದು ನಿಗದಿಪಡಿಸಲಾಗಿದೆ.
ಕಳೆದ ವರ್ಷ, 38 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ದೇವಾಲಯಗಳಿಗೆ ಭೇಟಿ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.