ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಗುರುತು ಪತ್ತೆಯಾಗದ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ವಾಘಮಾ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಈ ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕಳೆದ ಒಂದು ತಿಂಗಳಿನಿಂದ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದೆ. ದಿನಕ್ಕೆ ಕನಿಷ್ಠವೆಂದರೂ 2-3 ಭಯೋತ್ಪಾದಕರು ಸಂಹರಿಸಲ್ಪಡುತ್ತಿದ್ದಾರೆ. ಈಗಾಗಲೇ ಟ್ರಾಲ್ ಮತ್ತು ದೋಡಾ ಪ್ರದೇಶಗಳನ್ನು ಭಯೋತ್ಪಾದಕ ಮುಕ್ತ ಎಂದು ಘೋಷಿಸಲಾಗಿದೆ.
ಅನಂತ್ನಾಗ್ನ ಖುಲ್ಚೋಹರ್ ಪ್ರದೇಶದಲ್ಲಿ ಸೋಮವಾರ ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಇಬ್ಬರು ಲಷ್ಕರ್-ಎ-ತೈಬಾ ಭಯೋತ್ಪಾದಕರನ್ನು ಗುಂಡಿಕ್ಕಿ ಸಂಹಾರ ಮಾಡಲಾಗಿದೆ.
ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನನ್ನು ದೋಡಾದ ನಿವಾಸಿ ಮಸೂದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ, ಈ ಪ್ರದೇಶದ ಕೊನೆಯ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಈತನಾಗಿದ್ದ, ಈತನ ಹತ್ಯೆಯೊಂದಿಗೆ ದೋಡ ಪ್ರದೇಶ ಭಯೋತ್ಪಾದಕ ಮುಕ್ತಗೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಅವರ ಉಗ್ರರ ಹತ್ಯೆಯನ್ನು “ಒಂದು ದೊಡ್ಡ ಯಶಸ್ಸು” ಎಂದು ಕರೆದಿದ್ದಾರೆ.
ಭದ್ರತಾ ಪಡೆಗಳು ಈ ವರ್ಷ ಕಾರ್ಯಾಚರಣೆಯನ್ನು ಚುರುಕುಗೊಳಿಸಿ 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಸಂಹರಿಸಿವೆ. ಜೂನ್ನಲ್ಲಿ ಒಟ್ಟು 46 ಭಯೋತ್ಪಾದಕರು ಹತರಾಗಿದ್ದಾರೆ, 2018 ರ ನವೆಂಬರ್ನಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. 46 ಮಂದಿ ಮೃತರಲ್ಲಿ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ಗಳು ಸೇರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.