ನವದೆಹಲಿ: ಲಡಾಖ್ನಲ್ಲಿ ನೈಜ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಭಾರತ ಕೈಗೊಳ್ಳುತ್ತಿರುವ ಕ್ರಮಗಳಿಗೆ ದೇಶದ ಜನರು ಬೆಂಬಲವನ್ನು ನೀಡುತ್ತಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ ಹೇಳಿದ್ದಾರೆ ಎಂದು ವರದಿಗಳಿಂದ ತಿಳಿಸಿವೆ.
ಆರ್ಗನೈಜರ್ಗೆ ಸಂದರ್ಶನ ನೀಡಿದ ಜೋಶಿ ಅವರು, ಗಡಿ ಸಂಘರ್ಷಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಸಾಮಾನ್ಯ ಜನರು ನಿರ್ಧರಿಸುವಂತಿಲ್ಲ ಮತ್ತು ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಮತ್ತು ಭಾರತೀಯ ಸೇನೆಯ ಮೇಲೆ ಸಂಘ ಮತ್ತು ಸಮಾಜಕ್ಕೆ ಸಂಪೂರ್ಣ ನಂಬಿಕೆ ಇದೆ ಎಂದಿದ್ದಾರೆ.
“ಪ್ರಸ್ತುತ ಸಂದರ್ಭದಲ್ಲಿ, ಸಮಸ್ಯೆಗೆ ಪರಿಹಾರವನ್ನು ಪಡೆಗಳು ಮತ್ತು ಸರ್ಕಾರ ನಿರ್ಧರಿಸುತ್ತದೆ. ಇದನ್ನು ಸಾಮಾನ್ಯ ಜನರಿಗೆ ನಿರ್ಧರಿಸಲು ಆಗುವುದಿಲ್ಲ. ನಮಗೆ ಪಡೆಗಳ ಮೇಲೆ ಸಂಪೂರ್ಣ ನಂಬಿಕೆ ಇದೆ” ಎಂದಿದ್ದಾರೆ.
ಚೀನಾದ ಸರಕುಗಳನ್ನು ಬಹಿಷ್ಕರಿಸುವ ಕೂಗು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಇದು ಭಾರತಕ್ಕೆ ಮಾತ್ರವಲ್ಲ, ಇಡೀ ಪ್ರಪಂಚಕ್ಕೆ ಒಂದು ಅವಕಾಶವಾಗಿದೆ. ಬೇರೆಯವರ ಮೇಲೆ ಅವಲಂಬಿತಗೊಳ್ಳದೆ ಮತ್ತು ಬೇರೆಯವರನ್ನು ಶೋಷಿಸದೆ ತಮ್ಮ ಅಗತ್ಯಗಳನ್ನು ಹೇಗೆ ಪೂರೈಸಬೇಕು ಎಂಬುದರ ಕುರಿತು ಯೋಚಿಸಲು ಇದು ಒಂದು ಅವಕಾಶವಾಗಿದೆ” ಎಂದು ಹೇಳಿದ್ದಾರೆ.
“ನಾವು ಪ್ರತಿ ಸ್ಥಳದಲ್ಲಿ ಬೇಡಿಕೆಗಳು ಮತ್ತು ಉತ್ಪಾದನೆಯನ್ನು ಮ್ಯಾಪ್ ಮಾಡಬೇಕಾಗಿದೆ, ಸಣ್ಣ ಉತ್ಪಾದನಾ ಘಟಕಗಳನ್ನು ಪ್ರೋತ್ಸಾಹಿಸಬೇಕಿದೆ” ಎಂದು ಅವರು ಹೇಳಿದ್ದಾರೆ.
ಚೀನಾದ ಸರಕುಗಳನ್ನು ಬಹಿಷ್ಕರಿಸುವ ಮನೋಭಾವವು ಅರ್ಥಭರಿತವಾದುದು, ಭಾರತವನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಸ್ಥಳೀಯ ಉತ್ಪನ್ನಗಳನ್ನು ನಾವು ಸ್ವೀಕರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
“ನಾವು ಇತರರನ್ನು ನಕಲಿಸುವ ಮೂಲಕ ಅಥವಾ ಅವರನ್ನು ಹೊಗಳುವ ಮೂಲಕ ದೊಡ್ಡವರಾಗಲು ಸಾಧ್ಯವಿಲ್ಲ, ನಮಗೆ ಸಾಮರ್ಥ್ಯವಿದೆ ಮತ್ತು ನಾವು ಸ್ವಾವಲಂಬಿಗಳಾಗಲು ಮಾರ್ಗಗಳನ್ನು ಸ್ವತಃ ರಚಿಸಬೇಕಿದೆ” ಎಂದು ಜೋಶಿ ಹೇಳಿದ್ದಾರೆ.
ಆರ್ಎಸ್ಎಸ್ ಸ್ವಾವಲಂಬನೆಯನ್ನು ಪ್ರತಿಪಾದಿಸುತ್ತಿದೆ ಮತ್ತು ಅದರ ಅಂಗಸಂಸ್ಥೆಗಳಾದ ಸ್ವದೇಶಿ ಜಾಗರಣ್ ಮಂಚ್ ಚೀನಾದ ಆಮದಿನ ಮೇಲೆ ಸಂಪೂರ್ಣ ನಿಷೇಧವನ್ನು ಹೇರಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.