ನವದೆಹಲಿ: ಮಾಜಿ ಪ್ರಧಾನಿ ಪಿ. ವಿ. ನರಸಿಂಹ ರಾವ್ ಅವರ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಸೋಮವಾರ ಪ್ರಕಟಿಸಿದೆ ಎಂದು ವರದಿಗಳು ತಿಳಿಸಿವೆ. ರಾವ್ ಅವರ 100ನೇ ಜನ್ಮ ದಿನಾಚರಣೆಯನ್ನು ಆಚರಿಸಿದ ಒಂದು ದಿನದ ನಂತರ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ರಾವ್ 1991 ರಿಂದ 1996 ರವರೆಗೆ ಭಾರತದ ಒಂಬತ್ತನೇ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅವರು 1921ರ ಜೂನ್ 28 ರಂದು ವಾರಂಗಲ್ನಲ್ಲಿ ಜನಿಸಿದರು, ಈ ಪ್ರದೇಶ ಈಗ ತೆಲಂಗಾಣದಲ್ಲಿದೆ. ಅವರನ್ನು ‘ಭಾರತೀಯ ಆರ್ಥಿಕ ಸುಧಾರಣೆಗಳ ಪಿತಾಮಹ’ ಎಂದು ಕರೆಯಲಾಗುತ್ತದೆ.
ಕೆ. ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನರಸಿಂಹ ರಾವ್ ಅವರಿಗೆ ನೀಡುವಂತೆ ಒತ್ತಾಯಿಸಿದೆ. ರಾವ್ ದೇಶದ ಹಣೆಬರಹವನ್ನು ಬದಲಾಯಿಸಿದ್ದಾರೆ ಮತ್ತು ಪ್ರಶಸ್ತಿಗೆ ಅರ್ಹರು ಎಂದು ಕೆಸಿಆರ್ ಪ್ರತಿಪಾದಿಸಿದ್ದಾರೆ.
ಈ ಬೇಡಿಕೆಯನ್ನು ಮುಂದಿಡಲು ಪ್ರಧಾನಿ ನರೇಂದ್ರ ಮೋದಿಯವರನ್ನು ವೈಯಕ್ತಿಕವಾಗಿ ಭೇಟಿ ಮಾಡಲಿದ್ದೇನೆ, ರಾಜ್ಯ ಸಚಿವ ಸಂಪುಟ ಮತ್ತು ರಾಜ್ಯ ವಿಧಾನಸಭೆಯೂ ಈ ನಿಟ್ಟಿನಲ್ಲಿ ನಿರ್ಣಯವನ್ನು ಅಂಗೀಕರಿಸಲಿದೆ ಎಂದು ರಾವ್ ಹೇಳಿದ್ದಾರೆ. ಮಾಜಿ ಪ್ರಧಾನ ಮಂತ್ರಿಯ ಹೆಸರನ್ನು ಹೈದರಾಬಾದ್ ವಿಶ್ವವಿದ್ಯಾಲಯಕ್ಕೆ ಮರುನಾಮಕರಣ ಮಾಡುವಂತೆಯೂ ತೆಲಂಗಾಣ ಸರ್ಕಾರವು ಕೇಂದ್ರವನ್ನು ಒತ್ತಾಯಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.