ಲಕ್ನೋ: ಹೂಡಿಕೆಗಳನ್ನು ಸೆಳೆಯುವ ನಿಟ್ಟಿನಲ್ಲಿ ಉತ್ತರಪ್ರದೇಶ ಮಾಡುತ್ತಿರುವ ಪ್ರಯತ್ನಕ್ಕೆ ಗಮನಾರ್ಹ ಫಲ ಸಿಕ್ಕಿದ್ದು, ಗ್ರೇಟರ್ ನೋಯ್ಡಾದಲ್ಲಿ 4000 ನೌಕರರು ಕಾರ್ಯ ನಿರ್ವಹಿಸಬಹುದಾದಂತಹ ಕ್ಯಾಂಪಸ್ ಒಂದನ್ನು ಆರಂಭಿಸುವುದಕ್ಕೆ ಮೈಕ್ರೋಸಾಫ್ಟ್ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಕುರಿತಂತೆ ಮೈಕ್ರೋಸಾಫ್ಟ್ ಇಂಡಿಯಾದ ಎಂಡಿ ರಾಜೀವ್ ಕುಮಾರ್ ಅವರು ಮತ್ತು ರಾಜ್ಯದ ಎಂಎಸ್ಎಂಇ ಸಚಿವ ಸಿದ್ಧಾರ್ಥ ನಾಥ್ ಸಿಂಗ್ ಅವರು ಮಹತ್ವದ ಮಾತುಕತೆಯನ್ನೂ ನಡೆಸಿದ್ದಾರೆ.
ರಾಜ್ಯದಲ್ಲಿ ಕಾರ್ಪೊರೇಟ್ ಉದ್ಯಮವನ್ನು ಸರಾಗಗೊಳಿಸಲು ಪಿಂಕ್ ಕಾರ್ಪೆಟ್ ವ್ಯವಸ್ಥೆಯನ್ನು ಮಾಡುವುದಾಗಿಯೂ ಸಿಂಗ್ ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ. ಇದಕ್ಕಾಗಿ ಹೆದ್ದಾರಿ ಬದಿಗಳಲ್ಲಿ ಖರೀದಿದಾರರಿಗೆ ಭೂಮಿ ಖರೀದಿಗೆ ಅನುಕೂಲವಾಗುವಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದೂ ಸಿಂಗ್ ಮಾಹಿತಿ ನೀಡಿದ್ದು ,ಆ ಮೂಲಕ ಬಂಡವಾಳ ಹೂಡಿಕೆದಾರರಿಗೆ ಪೂರಕ ವ್ಯವಸ್ಥೆ ಕಲ್ಪಿಸಿರುವುದಾಗಿಯೂ ಸಿಂಗ್ ತಿಳಿಸಿದ್ದಾರೆ.
ಅಲ್ಲದೆ ಕಾರ್ಪೊರೇಟ್ ಕಂಪೆನಿಗಳು ಉತ್ತರ ಭಾರತದಲ್ಲಿನ ತಮ್ಮ ಕ್ಯಾಂಪಸ್ ಗಳನ್ನು ನೋಯ್ಡಾಗೆ ವರ್ಗಾಯಿಸುವ ಇರಾದೆಯನ್ನು ವ್ಯಕ್ತಪಡಿಸಿದೆ ಎಂದೂ ಸಿಂಗ್ ಮಾಹಿತಿ ನೀಡಿದ್ದಾರೆ. ಇನ್ನು ಈ ಸಾಫ್ಟ್ವೇರ್ ಪ್ರೋಗ್ರಾಂ ಎರಡು ಕ್ಯಾಂಪಸ್ಗಳು, ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಪ್ರಧಾನ ಕಛೇರಿಗಳನ್ನು ಹೊಂದಿದೆ. ಸದ್ಯ ಲಾರ್ಜರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ ವೇ ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಎಲೆಕ್ಟ್ರೋನಿಕ್ಸ್ ಉತ್ಪಾದನಾ ಪಾರ್ಕ್ ಅನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿಯೂ ಚಿಂತನೆಗಳು ನಡೆಯುತ್ತಿದೆ. ಅಲ್ಲದೆ ಉತ್ಪಾದನೆಗೆ ಮುಂದಾಗುವ ಕಂಪನಿಗಳಿಗೆ ರಾಜ್ಯದಿಂದ ಸಬ್ಸಿಡಿ, ಪ್ರೋತ್ಸಾಹ ಸಹ ನೀಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಈ ಕುರಿತಂತೆ ಟಾಟಾ ಕನ್ಸಲ್ಟೆನ್ಸ್ ಕಂಪನಿಗಳು, ವಿಪ್ರೋ ಮೊದಲಾದ ಸಂಸ್ಥೆಗಳು ನೋಯ್ಡಾ, ಲಾರ್ಜರ್ ನೋಯ್ಡಾಗಳಲ್ಲಿ ಹೂಡಿಕೆ ಮಾಡುವ ಬಗ್ಗೆಯೂ ಮಾತುಕತೆಗಳನ್ನು ನಡೆಸುತ್ತಿದೆ ಎಂದೂ ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.