ನವದೆಹಲಿ: ಹೆದ್ದಾರಿ ಯೋಜನೆಗಳಲ್ಲಿ ಭಾಗವಹಿಸಲು ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಜಂಟಿ ಉದ್ಯಮಕ್ಕೂ ಇದು ಅನ್ವಯಿಸುತ್ತದೆ ಎಂದಿದ್ದಾರೆ. ಲಡಾಖ್ನಲ್ಲಿನ ನೈಜ ನಿಯಂತ್ರಣ ರೇಖೆಯಲ್ಲಿ ಚೀನಾ ಜೊತೆಗಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆ (ಎಂಎಸ್ಎಂಇ)ಗಳಂತಹ ವಿವಿಧ ಕ್ಷೇತ್ರಗಳಲ್ಲಿ ಚೀನಾದ ಹೂಡಿಕೆದಾರರಿಗೆ ಅವಕಾಶ ಸಿಗದಂತೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಗಡ್ಕರಿ ಹೇಳಿದ್ದಾರೆ.
ಲಡಾಖ್ನಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಸಚಿವರ ಹೇಳಿಕೆಯು ಮಹತ್ವವನ್ನು ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವು ಸೋಮವಾರ 59 ಚೀನಿ ಆ್ಯಪ್ಗಳನ್ನು ನಿಷೇಧಿಸಿದೆ.
“ರಸ್ತೆ ನಿರ್ಮಾಣಕ್ಕಾಗಿ ಚೀನಾದ ಪಾಲುದಾರರನ್ನು ಹೊಂದಿರುವ ಜಂಟಿ ಉದ್ಯಮಗಳಿಗೆ ನಾವು ಅನುಮತಿ ನೀಡುವುದಿಲ್ಲ. ಚೀನೀ ಕಂಪನಿಗಳು ನಮ್ಮ ದೇಶದಲ್ಲಿ ಜಂಟಿ ಉದ್ಯಮದ ಮೂಲಕ ಬಂದರೆ ನಾವು ಅದನ್ನು ಅನುಮತಿಸುವುದಿಲ್ಲ ಎಂದು ನಾವು ದೃಢವಾದ ನಿಲುವನ್ನು ತೆಗೆದುಕೊಂಡಿದ್ದೇವೆ” ಎಂದು ಗಡ್ಕರಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಹೆದ್ದಾರಿ ಯೋಜನೆಗಳಲ್ಲಿ ಭಾಗವಹಿಸಲು, ತಮ್ಮ ಅರ್ಹತಾ ಮಾನದಂಡಗಳನ್ನು ವಿಸ್ತರಿಸಲು ಚೀನಾದ ಸಂಸ್ಥೆಗಳಿಗೆ ನಿಷೇಧ ಹೇರಲು ಮತ್ತು ಭಾರತೀಯ ಕಂಪನಿಗಳಿಗೆ ನಿಮಯಗಳನ್ನು ಸಡಿಲಿಸಲು ಶೀಘ್ರದಲ್ಲೇ ಕ್ರಮಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.
ಅಸ್ತಿತ್ವದಲ್ಲಿರುವ ಟೆಂಡರ್ಗಳು ಮತ್ತು ಭವಿಷ್ಯದ ಬಿಡ್ಗಳಿಗೆ ಸಂಬಂಧಿಸಿದಂತೆ, ಚೀನಾದ ಯಾವುದೇ ಜಂಟಿ ಉದ್ಯಮಗಳು ಇದ್ದಲ್ಲಿ ಶೀಘ್ರದಲ್ಲೇ ರಿಬಿಡ್ಡಿಂಗ್ ಮಾಡಲಾಗುವುದು ಎಂದು ಗಡ್ಕರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.