ನವದೆಹಲಿ: ತ್ರಿಪುರಾ ಸರ್ಕಾರವು ಜುಲೈ 4ರಿಂದ ವಿಟಮಿನ್ ಸಿ ಅನ್ನು ಒಳಗೊಂಡ ಹಣ್ಣುಗಳನ್ನು ಅದರಲ್ಲೂ ಮುಖ್ಯವಾಗಿ ಅನಾನಸ್ ಮತ್ತು ನಿಂಬೆಯನ್ನು ನಗರ ಪ್ರದೇಶದ ಜನರಿಗೆ ಉಚಿತವಾಗಿ ವಿತರಿಸಲು ನಿರ್ಧರಿಸಿದೆ. ಇದು ಕೊರೋನಾವೈರಸ್ ಕಾಯಿಲೆ ವಿರುದ್ಧದ ಹೋರಾಟದಲ್ಲಿ ಜನರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲಿದೆ.
ಈ ರಾಜ್ಯದಲ್ಲಿ ವ್ಯಾಪಕವಾಗಿ ಬೆಳೆಯಲಾಗುವ ಅನಾನಸ್ ಮತ್ತು ನಿಂಬೆ ಎರಡೂ ವಿಟಮಿನ್ ಸಿ ಸಮೃದ್ಧವಾಗಿವೆ ಮತ್ತು ಯಾವುದೇ ವೈರಸ್ ದಾಳಿಯನ್ನು ತಡೆಗಟ್ಟಲು ಆ್ಯಂಟಿ-ಆಕ್ಸಿಡೆಂಟ್ಗಳಾಗಿ ಕಾರ್ಯನಿರ್ವಹಿಸಬಲ್ಲ ಸಾಮರ್ಥ್ಯವನ್ನು ಹೊಂದಿರಲಿದೆ.
ಹಣ್ಣುಗಳ ವಿತರಣಾ ಕಾರ್ಯಕ್ರಮವು ರಾಜ್ಯ ಸರ್ಕಾರದ ಒಂದು ತಿಂಗಳ ಅವಧಿಯ ‘ಮುಖ್ಯಮಂತ್ರಿ ಕೊರೋನಾ ಪ್ರತಿರೋಧಕ್ ಅಭಿಯಾನ್ (ಕೊರೋನಾ ವಿರುದ್ಧ ಮುಖ್ಯಮಂತ್ರಿಯವರ ಸಾರ್ವಜನಿಕ ರೋಗನಿರೋಧಕ ಅಭಿಯಾನ)ʼದ ಒಂದು ಭಾಗವಾಗಿದೆ ಎಂದು ವರದಿಗಳು ತಿಳಿಸಿವೆ.
ವಿಟಮಿನ್ ಸಿ ಹೊಂದಿದ ಹಣ್ಣುಗಳನ್ನು ಪ್ರತಿ ಶನಿವಾರ ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ 25 ಸ್ಥಳೀಯ ನಗರ ಸಂಸ್ಥೆಗಳು ಮತ್ತು ಉಪ ವಿಭಾಗೀಯ ಕಚೇರಿಗಳಲ್ಲಿ ವಿತರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
“ನಾವು ಶನಿವಾರ (ಜುಲೈ 4)ರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನಗರ ಪ್ರದೇಶದ ಜನರಿಗೆ ನಿಂಬೆ ಮತ್ತು ಅನಾನಸ್ ವಿತರಿಸುವ ಕಾರ್ಯ ಆರಂಭಿಸುತ್ತೇವೆ. ನಾವು ಈ ಹಣ್ಣುಗಳನ್ನು ನೇರವಾಗಿ ರೈತರಿಂದ ಖರೀದಿಸುತ್ತಿದ್ದೇವೆ, ಇದರಿಂದ ಅವರು ಲಾಭ ಗಳಿಸಬಹುದು”ಎಂದು ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ನಗರ ಜೀವನೋಪಾಯ ಮಿಷನ್ ಈ ಯೋಜನೆಯನ್ನು ತಳಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಈ ಯೋಜನೆಗಾಗಿ ತ್ರಿಪುರಾ ಸರ್ಕಾರ ಒಂದು ಕೋಟಿ ರೂಪಾಯಿಗಳನ್ನು ವ್ಯಯಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.