ನವದೆಹಲಿ: ಯುದ್ಧೋನ್ಮಾದ ಚೀನಾಗೆ ಭಾರತ ಮತ್ತೊಂದು ಟಾಂಗ್ ನೀಡಿದೆ, ಹಾಂಗ್ಕಾಂಗ್ನಲ್ಲಿ ವಿಧಿಸಲಾದ ಕಠಿಣ ರಾಷ್ಟ್ರೀಯ ಭದ್ರತಾ ಕಾನೂನನ್ನು ಭಾರತ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಪ್ರಶ್ನೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ, ಜಿನೀವಾದಲ್ಲಿನ ಯುಎನ್ ಮಾನವ ಹಕ್ಕುಗಳ ಮಂಡಳಿಯಲ್ಲಿ ಭಾರತ ಈ ವಿಷಯದ ಬಗ್ಗೆ ಮಾತನಾಡಿದೆ ಮತ್ತು ಹಾಂಗ್ಕಾಂಗ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ನಿಕಟ ಗಮನ ಇರಿಸಿರುವುದಾಗಿ ಹೇಳಿದೆ.
ಜಿನೀವಾದಲ್ಲಿ ಯುಎನ್ನ ಭಾರತದ ಖಾಯಂ ಪ್ರತಿನಿಧಿ ರಾಜೀವ್ ಚಂದರ್ ಅವರು ಮಾತನಾಡಿ, “ಹಾಂಗ್ಕಾಂಗ್ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸುವ ಹಲವಾರು ಹೇಳಿಕೆಗಳನ್ನು ನಾವು ಕೇಳಿದ್ದೇವೆ. ಸಂಬಂಧಿತ ಪಕ್ಷಗಳು ಈ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡು ಅವುಗಳನ್ನು ಸರಿಯಾಗಿ, ಗಂಭೀರವಾಗಿ ಮತ್ತು ವಸ್ತುನಿಷ್ಠವಾಗಿ ಪರಿಹರಿಸುತ್ತವೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದ್ದಾರೆ.
ಹಾಂಗ್ಕಾಂಗ್ ಅನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಲು ಚೀನಾ ಕಠಿಣ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದು, ಇದಕ್ಕೆ ಚೀನಾದ ವಿರುದ್ಧ ಅಂತಾರಾಷ್ಟ್ರೀಯ ಸಮುದಾಯಗಳು ಮುಗಿಬಿದ್ದಿವೆ. ಚೀನಾದ ನಿಲುವುಗಳನ್ನು ವಿರೋಧಿಸುತ್ತಿವೆ. ಇದೀಗ ಈ ಪಟ್ಟಿಗೆ ಭಾರತವೂ ಸೇರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.