ನವದೆಹಲಿ: ಚೀನಾದಿಂದ ಜೀವಪಡೆದ ಕೊರೋನಾ ವೈರಸ್ ಇಡೀ ಜಗತ್ತನ್ನೇ ಹೈರಾಣಾಗಿಸಿದೆ. ಭಾರತದಲ್ಲಿಯೂ ಇದು ತನ್ನ ಕಬಂಧ ಬಾಹುಗಳನ್ನು ಚಾಚಿದ್ದು, ಈ ವರೆಗೆ ದೇಶದಲ್ಲಿ 91 ಲಕ್ಷ ಕೊರೋನಾ ಟೆಸ್ಟ್ಗಳನ್ನು ಕೊರೋನಾಗಾಗು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಕೊರೋನಾ ಪರೀಕ್ಷೆಗಳ ಸಂಖ್ಯೆ 1 ಕೋಟಿ ದಾಟಲಿದೆ ಎಂದಿದ್ದಾರೆ.
ನಾವು ಈಗಾಗಲೇ 91 ಲಕ್ಷಕ್ಕೂ ಹೆಚ್ಚು ಕೊರೋನಾ ಟೆಸ್ಟ್ಗಳನ್ನು ನಡೆಸಿದ್ದು, ಇನ್ನೇನು ಕೋಟಿಗೇರಲಿದ್ದೇವೆ. ಭಾರತ ಕೊರೋನಾ ವಿರುದ್ಧ ಇತರೆಲ್ಲಾ ದೇಶಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿ ಹೋರಾಟ ನಡೆಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಭಾರತ ಚಿಕಿತ್ಸೆಯ ವಿಚಾರದಲ್ಲಿಯೂ ಹೆಚ್ಚು ಪರಿಣಾಮಕಾರಿಯಾಗಿ ಯಶಸ್ಸು ಪಡೆಯುತ್ತಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ 135 ಕೋಟಿ ಜನಸಂಖ್ಯೆ ಇದ್ದು, ಅವರಲ್ಲಿ ಕೇವಲ 6 ಲಕ್ಷದಷ್ಟು ಜನರು ಕೊರೋನಾ ಪೀಡಿತರಾಗಿದ್ದಾರೆ. 3 ಲಕ್ಷ ದ 60 ಸಾವಿರ ಜನರು ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಅಲ್ಲದೆ ಈಗಿರುವ ಸೋಂಕಿತರಲ್ಲಿಯೂ ಚಿಕಿತ್ಸೆಗೆ ಸ್ಪಂದಿಸುವವರ ಸಂಖ್ಯೆ ಹೆಚ್ಚಾಗಿದ್ದು, ಅವರೂ ಗುಣಮುಖರಾಗಿ ಶೀಘ್ರ ಮನೆ ಸೇರಲಿದ್ದಾರೆ ಎಂದೂ ಹರ್ಷವರ್ಧನ್ ತಿಳಿಸಿದ್ದಾರೆ.
ಇಡೀ ವಿಶ್ವದಲ್ಲಿಯೇ 2. 94% ರಷ್ಟು ಸಾವಿನ ಪ್ರಮಾಣ ಭಾರತದಲ್ಲಿ ವರದಿಯಾಗಿದೆ ಎಂದೂ ಅವರು ಹೇಳಿದ್ದಾರೆ. ಈಗಾಗಲೇ 60% ರಷ್ಟು ಚೇತರಿಕಾ ಪ್ರಮಾಣ ಇದ್ದು, ಮುಂದಿನ 21-22 ದಿನಗಳಲ್ಲಿ ಚೇತರಿಕೆಯ ಪ್ರಮಾಣ ಇನ್ನೂ ಹೆಚ್ಚಾಗುವ ಭರವಸೆಯನ್ನೂ ಸಚಿವರು ದೇಶವಾಸಿಗಳಿಗೆ ನೀಡಿದ್ದಾರೆ.
ಭಾರತದಲ್ಲಿ 1000ಕ್ಕೂ ಅಧಿಕ ಪ್ರಯೋಗಾಲಯಗಳು ಕೊರೋನಾ ಟೆಸ್ಟ್ಗಳನ್ನು ನಡೆಸುತ್ತಿದ್ದು, ದಿನೇ ದಿನೇ ಟೆಸ್ಟ್ ನಡೆಸುತ್ತಿರುವ ಸಂಖ್ಯೆಯಲ್ಲಿಯೂ ಹೆಚ್ಚಳವಾಗುತ್ತಿದೆ. ನಿನ್ನೆಯಷ್ಟೇ ದೇಶದಲ್ಲಿ 2 ಲಕ್ಷದ 30 ಸಾವಿನ ಜನರಿಗೆ ಕೊರೋನಾ ತಪಾಸಣೆ ನಡೆಸಲಾಗಿತ್ತು ಎಂದೂ ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ಈವರೆಗೆ 118 ಲಕ್ಷಗಳಷ್ಟು ಪಿಪಿಇ ಕಿಟ್, 195 ಲಕ್ಷ ಎನ್-95 ಮಾಸ್ಕ್ ಗಳನ್ನೂ ಜನರಿಗೆ ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಅಲ್ಲದೆ ಪ್ರತಿನಿತ್ಯವೂ ಲಭ್ಯವಿರುವ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿಯೂ ಪ್ರಯತ್ನ ನಡೆಸಲಾಗುತ್ತಿದೆ. ಅಲ್ಲದೆ ದೇಶಾದ್ಯಂತ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು 1.3 ಮಿಲಿಯನ್ ಹಾಸಿಗೆಗಳು ಲಭ್ಯವಿರುವುದಾಗಿಯೂ ಅವರು ತಿಳಿಸಿದ್ದಾರೆ. ಅಲ್ಲದೆ ಡಿಆರ್ ಡಿಓ ವತಿಯಿಂದ ದೆಹಲಿಯಲ್ಲಿ1000 ಹಾಸಿಗೆಗಳ ಆಸ್ಪತ್ರೆಯನ್ನೂ ಭವಿಷ್ಯದ ಭದ್ರತೆಗಾಗಿ ನಿರ್ಮಾಣ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಇನ್ನು ಕೇಂದ್ರ ಸರ್ಕಾರ ಕೈಗೊಂಡ ಎಲ್ಲಾ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಎಲ್ಲಾ ರಾಜ್ಯ ಸರ್ಕಾರಗಳೂ ಕೈ ಜೋಡಿಸಿವೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರೂ ಈ ಕೆಲಸದಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ. ಇದರಿಂದಾಗಿ ಯಾವುದೇ ಕೊರತೆ ಬಾಧಿಸದಂತೆ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಪೂರಕವಾಗುವಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದೂ ಹರ್ಷವರ್ಧನ್ ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.