ನವದೆಹಲಿ: ಕೊರೋನಾ ಬಂದ ಬಳಿಕ ವಿದೇಶದಲ್ಲಿ ಸಿಲುಕಿ ಹಾಕಿಕೊಂಡಿರುವ ಭಾರತೀಯರನ್ನು ದೇಶಕ್ಕೆ ಕರೆತರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದ್ದು, ಈಗಾಗಲೇ 4.75 ಲಕ್ಷಕ್ಕೂ ಅಧಿಕ ಭಾರತೀಯರನ್ನು ಸ್ವದೇಶಕ್ಕೆ ವಂದೇ ಭಾರತ್ ಮಿಷನ್ ಅಡಿಯಲ್ಲಿ ಕರೆತರಲಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯ, ಈ ವರೆಗೆ ಮೂರು ಹಂತಗಳಲ್ಲಿ ವಂದೇ ಭಾರತ್ ಮಿಶನ್ ಮೂಲಕ ವಿದೇಶದಲ್ಲಿ ಸಿಲುಕಿದ್ದ 4.75 ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ಭಾರತಕ್ಕೆ ಕರೆತರಲಾಗಿದೆ. ಈಗ ನಾಲ್ಕನೇ ಹಂತದ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದ್ದು, ಇನ್ನಷ್ಟು ಜನರನ್ನು ಭಾರತಕ್ಕೆ ಕರೆತರಲಾಗುವುದಾಗಿ ತಿಳಿಸಿದೆ.
ಮೇ 7 ರಂದು ಕೇಂದ್ರ ಸರ್ಕಾರ ವಂದೇ ಭಾರತ್ ಮಿಷನ್ ಅನ್ನು ಆರಂಭಿಸಿದ್ದು, ಜುಲೈ 1 ರ ಮೊದಲೇ 4,75,000 ಕ್ಕೂ ಅಧಿಕ ಜನರು ಭಾರತಕ್ಕೆ ಮರಳಿದ್ದಾರೆ. 5,83,109 ಮಂದಿ ಈ ಯೋಜನೆಯಲ್ಲಿ ಭಾರತಕ್ಕೆ ಬರಲು ಹೆಸರು ನೋಂದಾಯಿಸಿಕೊಂಡಿರುವುದಾಗಿಯೂ ತಿಳಿಸಿದ್ದಾರೆ.
ಇನ್ನು ನಾಲ್ಕನೇ ಹಂತದ ವಿಮಾನಗಳ ಪಟ್ಟಿಯನ್ನು ವಿದೇಶಾಂಗ ಸಚಿವಾಲಯದ ವೆಬ್ಸೈಟ್ ನಲ್ಲಿ ತಿಳಿದುಕೊಳ್ಳಬಹುದು ಎಂದೂ ಸಚಿವಾಲಯದ ವಕ್ತಾರ ಅನುರಾಗ್ ಶ್ರೀ ವಾಸ್ತವ ಅವರು ತಿಳಿಸಿದ್ದಾರೆ. ಏರ್ ಇಂಡಿಯಾ ಮತ್ತು ಖಾಸಗಿ ವಿಮಾನಗಳು ಸೇರಿದಂತೆ 500 ಕ್ಕೂ ಅಧಿಕ ವಿಮಾನಗಳು ಕಾರ್ಯ ನಿರ್ವಹಿಸಲಿದೆ ಎಂದೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.