ನವದೆಹಲಿ: ಕಳೆದ ತಿಂಗಳು ಗಾಲ್ವಾನ್ ಕಣಿವೆಯಲ್ಲಿ ನಡೆದ ಚೀನಾದೊಂದಿಗಿನ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಸೇನಾ ಯೋಧರುಗಳಿಗೆ ಶ್ರೇಷ್ಠ ಗೌರವವನ್ನು ಅರ್ಪಣೆ ಮಾಡಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ನಿರ್ಧರಿಸಿದೆ. ದೆಹಲಿಯ ಹೊಸ ಸರ್ದಾರ್ ವಲ್ಲಭಭಾಯಿ ಪಟೇಲ್ ಕೋವಿಡ್ -19 ಆಸ್ಪತ್ರೆಯ ವಿವಿಧ ವಾರ್ಡ್ಗಳಿಗೆ ಹುತಾತ್ಮರ ಹೆಸರನ್ನು ಇಡಲು ನಿರ್ಧರಿಸಲಾಗಿದೆ.
“ಜೂನ್ 15ರಂದು ಗಾಲ್ವಾನ್ ವ್ಯಾಲಿ ಘರ್ಷಣೆಯಲ್ಲಿ ಪ್ರಾಣ ಕಳೆದುಕೊಂಡ ಹುತಾತ್ಮ ಭಾರತೀಯ ಸೇನಾ ಸಿಬ್ಬಂದಿಗಳ ಗೌರವಾರ್ಥವಾಗಿ, ಡಿಆರ್ಡಿಒ ದೆಹಲಿಯ ಹೊಸ ಸರ್ದಾರ್ ವಲ್ಲಭಭಾಯಿ ಪಟೇಲ್ ಕೋವಿಡ್ -19 ಆಸ್ಪತ್ರೆಯ ವಿವಿಧ ವಾರ್ಡ್ಗಳಿಗೆ ಹುತಾತ್ಮರ ಹೆಸರನ್ನು ಇಡಲು ನಿರ್ಧರಿಸಿದೆ” ಎಂದು ಡಿಆರ್ಡಿಒ ಅಧ್ಯಕ್ಷರ ತಂತ್ರಜ್ಞಾನ ಸಲಹೆಗಾರರಾಗಿರುವ ಸಂಜೀವ್ ಜೋಶಿ ಹೇಳಿದ್ದಾರೆ.
ದೆಹಲಿ-ಹರಿಯಾಣ ಗಡಿಯ ಸಮೀಪವಿರುವ ಛಾತ್ರಪುರ ಪ್ರದೇಶದ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಆವರಣದಲ್ಲಿ ನಿರ್ಮಿಸಲಾದ ದೆಹಲಿಯ ಅತಿದೊಡ್ಡ ಕೋವಿಡ್-19 ಆರೈಕೆ ಕೇಂದ್ರವು ಏಕ ಕಾಲದಲ್ಲಿ 10,000 ಕೊರೋನಾವೈರಸ್ ರೋಗಿಗಳಿಗೆ ಆಶ್ರಯ ಮತ್ತು ಚಿಕಿತ್ಸೆ ನೀಡುವ ಸಾಮರ್ಥ್ಯವನ್ನು ಹೊಂದಿದೆ.
ವೈದ್ಯರು ಸೇರಿದಂತೆ 2,000ಕ್ಕೂ ಹೆಚ್ಚು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮತ್ತು ಇತರ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಸಿಬ್ಬಂದಿ ಆಸ್ಪತ್ರೆಯ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಡಾಕ್ನ ಲೇಹ್ಗೆ ಭೇಟಿ ನೀಡಿದ ದಿನವೇ ಡಿಆರ್ಡಿಓ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಜೂನ್ 15-16ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.