ನವದೆಹಲಿ: ತೀವ್ರವಾದ ನೆರೆಯಿಂದಾಗಿ ಅಸ್ಸಾಂ ತತ್ತರಿಸಿ ಹೋಗುತ್ತಿದೆ. ಈಗಾಗಲೇ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದ್ದು, ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಸಂಬಂಧಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
“ಅಸ್ಸಾಂ ಪ್ರವಾಹದಿಂದ ಪ್ರಾಣ ಕಳೆದುಕೊಂಡ ರಕ್ತಸಂಬಂಧಿಗಳಿಗೆ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ” ಎಂದು ಮೋದಿ ತಮ್ಮ ಪಿಎಂಒ ಟ್ವಿಟರ್ ಹ್ಯಾಂಡಲ್ನಿಂದ ಟ್ವೀಟ್ ಮಾಡಿದ್ದಾರೆ.
ಮೋದಿ ಶುಕ್ರವಾರ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ಅವರೊಂದಿಗೆ ಮಾತನಾಡಿದರು, ಭಾರೀ ಮಳೆ ಮತ್ತು ಪ್ರವಾಹದ ನಂತರದ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸೋನೊವಾಲ್ ಅವರಿಗೆ ಎಲ್ಲಾ ರೀತಿಯ ಕೇಂದ್ರದ ನೆರವನ್ನು ನೀಡುವ ಭರವಸೆಯನ್ನು ಅವರು ನೀಡಿದರು.
ಅಸ್ಸಾಂನಲ್ಲಿನ ಪ್ರವಾಹಕ್ಕೆ ಈವರೆಗೆ 33 ಮಂದಿ ಜೀವ ಕಳೆದುಕೊಂಡಿದ್ದಾರೆ, ಜೊತೆಗೆ ರಾಜ್ಯದ 33 ಜಿಲ್ಲೆಗಳ ಪೈಕಿ 21ರಲ್ಲಿ ಸುಮಾರು 15 ಲಕ್ಷ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರ ಪ್ರವಾಹ ಆರಂಭವಾಗಿನಿಂದಲೂ ಧುಬ್ರಿ, ನಾಗಾನ್, ನಲ್ಬಾರಿ, ಬಾರ್ಪೇಟಾ, ಧೆಮಾಜಿ, ಉಡಲ್ಗುರಿ, ಗೋಲ್ಪರಾ ಮತ್ತು ದಿಬ್ರುಘರ್ ಜಿಲ್ಲೆಗಳಲ್ಲಿ 18 ಜನರು ಸಾವನ್ನಪ್ಪಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್ಡಿಎಂಎ) ಅಧಿಕಾರಿಗಳು ತಿಳಿಸಿದ್ದರು. ಮೇ 22 ರಿಂದ ಭೂಕುಸಿತದಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ.
PM @narendramodi has sanctioned ex-gratia of Rs. 2 lakh each for next of kin of persons who lost their lives due to floods in Assam, from PMNRF.
— PMO India (@PMOIndia) July 3, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.