ಬೆಂಗಳೂರು: ನೇಕಾರ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ನೋಂದಾವಣೆ ಮಾಡಿಕೊಂಡಿರುವ ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದರು.
ಗೃಹ ಕಛೇರಿ ಕೃಷ್ಣಾ ದಲ್ಲಿ ಆನ್ಲೈನ್ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಕೈಮಗ್ಗ ಗಣತಿಯಂತೆ ಕರ್ನಾಟಕದಲ್ಲಿ 54789 ಕೈ ಮಗ್ಗ ಕಸುಬು ನಡೆಸುವವರು ನೋಂದಣಿ ಮಾಡಿಕೊಂಡಿದ್ದಾರೆ. ಈ ಯೋಜನೆಯಲ್ಲಿ ಪ್ರತಿ ವರ್ಷ 1096 ಕೋಟಿ ರೂ. ನೆರವನ್ನು ನೇಕಾರರಿಗೆ ನೀಡಲಾಗುತ್ತಿದ್ದು, ಈ ಬಾರಿ ಮೊದಲ ಹಂತದ 2000 ರೂ. ಗಳನ್ನು ನೇಕಾರರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ. ಗಣತಿಯಲ್ಲಿ ನೋಂದಾಯಿಸಿಕೊಳ್ಳದ ನೇಕಾರರಿಗೂ ಈ ಸೌಲಭ್ಯವನ್ನು ನೀಡುವುದಾಗಿ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.
ಈ ಯೋಜನೆಯಡಿಯಲ್ಲಿ ಇಲ್ಲಿಯ ವರೆಗೆ 40634 ಮಂದಿ ನೇಕಾರರು ಸೇವಾ ಸಿಂಧುವಿನ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಅವುಗಳಲ್ಲಿ 37314 ಅರ್ಜಿಗಳು ಪುರಸ್ಕೃತವಾಗಿವೆ. ಇದಲ್ಲದೆ ಇನ್ನುಳಿದ ಅರ್ಹರ ಖಾತೆಗಳಿಗೂ ಹಣವನ್ನು ನೇರ ವರ್ಗ ಮಾಡುವ ಭರವಸೆಯನ್ನೂ ಸಿಎಂ ನೀಡಿದ್ದಾರೆ. ಜೊತೆಗೆ ವಿದ್ಯುತ್ ಮಗ್ಗಗಳಲ್ಲಿ ಕಾರ್ಯ ನಿರ್ವಹಿಸುವ ನೇಕಾರರಿಗೂ ಒಂದು ಬಾರಿಯ 2000 ರೂ. ಪರಿಹಾರ ಧನವನ್ನು ವಿತರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.