ನವದೆಹಲಿ: ವಿಶ್ವದಲ್ಲಿಯೇ ಭಾರತ ಅತ್ಯಂತ ಜವಾಬ್ದಾರಿಯುತ ದೇಶವಾಗಿದ್ದು, ಇದು ಜಗತ್ತಿನ ವಿವಿಧ ರಾಷ್ಟ್ರಗಳ ಅಭಿವೃದ್ಧಿಗೂ ಪೂರಕ ಸಹಾಯಗಳನ್ನು ಒದಗಿಸುವ ಶಕ್ತಿಯನ್ನು ಹೊಂದಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧ್ಯಕ್ಷ ಮಹಮ್ಮದ್ ಬಂದೆ ಅವರು ಹೇಳಿದ್ದಾರೆ.
ತಾಂತ್ರಿಕವಾಗಿ, ಜನಸಂಖ್ಯಾ ಆಧಾರದಲ್ಲಿ ಪರಿಸ್ಥಿತಿಗಳನ್ನು ಸರಿಯಾಗಿ ಅವಲೋಕನ ನಡೆಸಿ, ಚಿಂತನೆಗಳ ಮೂಲಕವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತ ಮಹತ್ವದ ಪಾತ್ರ ವಹಿಸುತ್ತದೆ. ಈ ಕಾರಣದಿಂದಲೇ ಅಂತರಾಷ್ಟ್ರೀಯ ಮಟ್ಟದ ಹಲವಾರು ವಿಚಾರಗಳಲ್ಲಿ ಭಾರತ ಪಾಲು ಪಡೆದಿದೆ. ಭಾರತದ ಚಿಂತನೆಯ ಕಾರಣದಿಂದಲೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೂ ಭಾರತ ಸಹಾಯ ಮಾಡಲಿದೆ. ಭಾರತ ಸ್ವಂತಕ್ಕೆ ಮಾತ್ರವಲ್ಲದೆ ಇತರ ರಾಷ್ಟ್ರಗಳ ಅಭಿವೃದ್ಧಿಗೂ ನೆರವು ನೀಡುತ್ತದೆ ಎಂದೂ ಅವರು ಹೇಳಿದ್ದಾರೆ.
ಭಾರತವು ಜಗತ್ತಿನ ಹೆಚ್ಚಿನ ರಾಷ್ಟ್ರಗಳ ಜೊತೆಗೆ ಆರೋಗ್ಯಪೂರ್ಣ ಸಂಬಂಧವನ್ನು ಹೊಂದಿದೆ. ಕಾಮನ್ವೆಲ್ತ್ ರಾಷ್ಟ್ರಗಳ ಜೊತೆಗೂ ಭಾರತದ ಸಂಬಂಧ ಉತ್ತಮವಾಗಿದೆ. ಈಗ ಭಾರತ ವಿಶ್ವ ಸಂಸ್ಥೆಯಲ್ಲಿಯೂ ಸ್ಥಾನ ಪಡೆದಿದ್ದು, ಕೋವಿಡ್ ಸಂದರ್ಭದಲ್ಲಿಯೂ ವಿಶ್ವಕ್ಕೆ ಮಾದರಿಯಾಗಿ ಕೆಲಸ ನಿರ್ವಹಿಸುತ್ತಿದೆ. ಕೊರೋನಾ ನಿಯಂತ್ರಣ ದೃಷ್ಟಿಯಲ್ಲಿಯೂ ಭಾರತ ಜಗತ್ತಿಗೆ ಮಾದರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಭಾರತ ಕಳೆದ ತಿಂಗಳಷ್ಟೇ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯನಾಗಿ ಆಯ್ಕೆಯಾಗಿತ್ತು. 192 ರಾಷ್ಟ್ರಗಳ ಪೈಕಿ 184 ರಾಷ್ಟ್ರಗಳು ಭಾರತವನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.