ಮುಜಾಫರಬಾದ್: ಪಾಕಿಸ್ಥಾನ ಮತ್ತು ಚೀನಾ ದೇಶಗಳು ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರ್ ಬಾದ್ನ ನೀಲಂ ಮತ್ತು ಜೆಲುಮ್ ನದಿಗಳಿಗೆ ಅಕ್ರಮವಾಗಿ ಅಣೆಕಟ್ಟು ನಿರ್ಮಾಣ ಮಾಡುವ ಕಾರ್ಯದಲ್ಲಿ ತೊಡಗಿವೆ, ಇದು ಪ್ರದೇಶದ ನಿವಾಸಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಚೀನಾ ಮತ್ತು ಪಾಕಿಸ್ಥಾನಗಳು ಈ ನದಿಗಳಿಗೆ ಅಣೆಕಟ್ಟು ನಿರ್ಮಾಣದ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಆದರೆ ಈ ಭಾಗದ ಜನರಲ್ಲಿ ಯಾವುದೇ ಅಭಿಪ್ರಾಯ ಸಂಗ್ರಹ ಮಾಡಿಲ್ಲ ಎಂದು ಪಾಕ್ ಆಕ್ರಮಿತ ಕಾಶ್ಮೀರ ವಲಯದ ನಿವಾಸಿಗಳು ಉಭಯ ದೇಶಗಳ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಈ ಅಣೆಕಟ್ಟು ನಿರ್ಮಾಣ ಕಾರ್ಯವೂ ಅಕ್ರಮವಾಗಿದೆ, ಜೊತೆಗೆ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಗಳ ನಿರ್ಣಯಗಳನ್ನು ಈ ಎರಡೂ ದೇಶಗಳು ಗಾಳಿಗೆ ತೂರಿದೆ ಎಂದೂ ಪ್ರತಿಭಟನಾ ನಿರತರು ತಿಳಿಸಿದ್ದಾರೆ.
ಈ ಅಣೆಕಟ್ಟು ನಿರ್ಮಾಣವಾದರೆ ಪ್ರಕೃತಿಯ ಮೇಲೆಯೂ ಅಡ್ಡ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂಬುದಾಗಿಯೂ ಇಲ್ಲಿನ ಪ್ರತಿಭಟನಾಕಾರರು ತಿಳಿಸಿದ್ದಾರೆ. ನೀಲಂ ಜೆಲುಮ್ ಹಾಗೂ ಕೊಹಲಾ ಜಲ ವಿದ್ಯುತ್ ಯೋಜನೆ ಯ ವಿರುದ್ಧವೂ ಇಲ್ಲಿನ ಜನರು ಪಾಕ್ ಮತ್ತು ಚೀನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿಯೂ ಪಿಒಕೆ ಜನರ ಪ್ರತಿಭಟನೆ ಮುಂದುವರಿದಿದೆ.
#SaveRiversSaveAJK ಎಂಬ ಹ್ಯಾಶ್ ಟಾಗ್ ನೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.